ಸದ್ಯಕ್ಕೆ ಬಸ್‌ ದರ ಹೆಚ್ಚಳ ಮಾಡುವುದಿಲ್ಲ :ಡಿಸಿಎಂ ಸವದಿ

ಬೆಂಗಳೂರು:ಅಧಿಕಾರಿಗಳು ಬಸ್‌ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ.
ಬಿಎಂಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿವೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ. ಬಡವರು ಬಸ್ಸಿನಲ್ಲಿ ಓಡಾಡುತ್ತಿದ್ದಾರೆ. ಮೊದಲೇ ಕೋವಿಡ್‌ ಸಂಕಷ್ಟ. ಹೀಗಾಗಿ ಅವರಿಗೆ ಮತ್ತೆ ಕಷ್ಟ ಕೊಡಲು ಹೋಗುವುದಿಲ್ಲ.. ಮುಂದೆ ನೋಡೋಣ. ಸದ್ಯವಂತೂ ಹೆಚ್ಚಳ ಮಾಡುವುದಿಲ್ಲ. ಎಂದು ಅವರು ತಿಳಿಸಿದರು‌.
ಜೂ.14ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಿದರೆ, ಹಂತ ಹಂತವಾಗಿ ಸಾರಿಗೆ ಸೇವೆ ಪ್ರಾರಂಭ ಮಾಡಲಾಗುವುದು.ಪ್ರಯಾಣಿಕರ ನಡುವೆ ಅಂತರ ಕಾಯ್ದುಕೊಂಡು, ಅವರಿಗೆ ಸ್ಯಾನಿಟೈಸರ್, ಮಾಸ್ಕ್ ಎಲ್ಲವನ್ನು ನೀಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು‌.
ಎರಡೂ ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವವರೆಗೂ ಸಾರಿಗೆ ನೌಕರರಿಗೆ ಒತ್ತಡ ಹಾಕುವುದಿಲ್ಲ. ಎರಡನೇ ಡೋಸ್ ತೆಗೆದುಕೊಂಡವರಿಗೆ ರಕ್ಷಣೆ ಕೊಟ್ಟು ಬಸ್ ಸೇವೆ ಪ್ರಾರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement