ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ನಾಳೆ (ಜೂನ್ 11) ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಜೂನ್ 21ರ ವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ನಂತರ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.
ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ನಿರ್ಬಂಧವಿದೆ. ಚುನಾವಣೆ ನಡೆಸಿದರೆ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಒಂದೆಡೆ ಸೇರುತ್ತಾರೆ. ಹೀಗಾಗಿ ಚುನಾವಣೆಗೆ ತಡೆ ನೀಡುವಂತೆ ಅರ್ಜಿದಾರರ ಪರ ಎಲ್.ಎಂ.ಚಿದಾನಂದಯ್ಯ ಮನವಿ ಮಾಡಿದ್ದರು. ಈ ವಾದ ಆಲಿಸಿದ ಹೈಕೋರ್ಟ್​ ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಮಧ್ಯಂತರ ಆದೇಶ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement