ಬೆಂಗಳೂರು :ಕರ್ನಾಟಕದಲ್ಲಿ ಕೊರೋನಾ ದೈನಂದಿನ ಸೋಂಕು ಕಡಿಮೆಯಾಗುತ್ತಿದ್ದು ಳೆದ 24 ಗಂಟೆಯಲ್ಲಿ (ಶನಿವಾರ) 9785 ಹೊಸ ಕೊರೊನಾ ಸೋಂಕು ದಾಖಲಾಗಿದೆ.
ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 144 ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27,57,324 ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 32,788ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ರಾಜ್ಯಾದ್ಯಂತ 21614 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಈವರೆಗೆ ಒಟ್ಟು 25,32,719 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 6.61%% ರಷ್ಟಿದೆ.
ಇಂದು ಬೆಂಗಳೂರಿನಲ್ಲಿ 2454 ಜನರಿಗೆ ಕೊರೊನಾ ಸೋಂಕು ರಗುಲಿದ ವರದಿಯಾಗಿದೆ, ನಗರದಲ್ಲಿಇದೇ ಸಮಯದಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಈವರೆಗೆ 1195340 ಮಂದಿಗೆ ಕೊರೊನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 15284 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ವಿವರಗಳನ್ನು ಪಿಡಿಎಫ್ ನಲ್ಲಿ ಕೆಳಗೆ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ