ಬೆಂಗಳೂರು :ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಉಲ್ಬಣ ಕಡಿಮೆಯಾಗುತ್ತಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 7810 ಹೊಸ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 125 ಮೃತಪಟ್ಟಿದ್ದಾರೆ.
ಇದೇ ಸಮಯದಲ್ಲಿ ರಾಜ್ಯದಲ್ಲಿ 18648 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2765134ಕ್ಕೆ ಏರಿದ್ದರೆ ಒಟ್ಟು ಸಾವಿನ ಸಂಖ್ಯೆ 32913ಕ್ಕೆ ಏರಿಕೆಯಾಗಿದೆ.ಈವರೆಗೆ ಒಟ್ಟು 25,51,365 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ
ಇದೇ ಸಮಯದಲ್ಲಿ ಬೆಂಗಳೂರಿನಲ್ಲಿ 1348 ಜನರಿಗೆ ಕೊರೊನಾ ತಗುಲಿದೆ, ನಗರದಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಲ್ಲಿ ಈವರೆಗೆ 11,96,688 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 15307 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್ನಲ್ಲಿ ಕೆಳಗೆ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ