ಕರ್ನಾಟಕದಲ್ಲಿ ಭಾನುವಾರ 8 ಸಾವಿರದ ಒಳಗೆ ವರದಿಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು :ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಉಲ್ಬಣ ಕಡಿಮೆಯಾಗುತ್ತಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 7810 ಹೊಸ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 125 ಮೃತಪಟ್ಟಿದ್ದಾರೆ.
ಇದೇ ಸಮಯದಲ್ಲಿ ರಾಜ್ಯದಲ್ಲಿ 18648 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2765134ಕ್ಕೆ ಏರಿದ್ದರೆ ಒಟ್ಟು ಸಾವಿನ ಸಂಖ್ಯೆ 32913ಕ್ಕೆ ಏರಿಕೆಯಾಗಿದೆ.ಈವರೆಗೆ ಒಟ್ಟು 25,51,365 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ
ಇದೇ ಸಮಯದಲ್ಲಿ ಬೆಂಗಳೂರಿನಲ್ಲಿ 1348 ಜನರಿಗೆ ಕೊರೊನಾ ತಗುಲಿದೆ, ನಗರದಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಲ್ಲಿ ಈವರೆಗೆ 11,96,688 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 15307 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

13-06-2021 HMB Kannada

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement