ನಾಳೆಯಿಂದ ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಭಾಗಶಃ ಲಾಕ್‌ಡೌನ್‌ ತೆರವು.. ಯಾವುದಕ್ಕೆ ಅವಕಾಶ, ಯಾವುದಕ್ಕೆ ಇಲ್ಲ ?

ಬೆಂಗಳೂರು: ಸುಮಾರು ಒಂದೂವರೆ ತಿಂಗಳ ಕಾಲ ಸ್ತಬ್ಧವಾಗಿದ್ದ ಕರ್ನಾಟಕ ನಾಳೆಯಿಂದ ಸ್ವಲ್ಪ ಚುರುಕುಗೊಳ್ಳಲಿದೆ.
ಸೋಮವಾರದಿಂದ ಕರ್ನಾಟಕದ 19 ಜಿಲ್ಲೆಗಳಲ್ಲಿ ಲಾಕ್​ಡೌನ್ ಭಾಗಶಃ ಸಡಿಲಗೊಳ್ಳಲಿದೆ. ಆದರೂ ಕೆಲವೊಂದು ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಯಲ್ಲಿರುತ್ತದೆ. ಸರ್ಕಾರ ಇದಕ್ಕಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಮಾಡಿದೆ.
ಆದರೆ ಕೋವಿಡ್‌ ಸಕಾರಾತ್ಮಕದರ ಶೇ.ಕ್ಕಿಂತ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 21ರ ವರೆಗೂ ಲಾಕ್​ಡೌನ್ ಯಥಾಸ್ತಿತಿ ಮುಂದುವರಿಯಲಿದೆ.
ಜಿಲ್ಲೆಗಳಾದ ಮೈಸೂರು, ಚಾಮರಾಜ ನಗರ, ಹಾಸ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆಯಿಂದಜೂನ್ 21ರ ವರೆಗೂ ಲಾಕ್​ಡೌನ್ ಮುಂದುವರೆಯಲಿದೆ.
ಉಳಿದ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಅನ್ನು ಭಾಗಶಃ ಸಡಿಲ ಮಾಡಲಾಗಿದ್ದು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಕಾರ್ನಿರ್ವಹಿಸಲು ಕೆಲವೊಂದು ವಿನಾಯಿತಿ ನೀಡಲಾಗಿದೆ. ಇದು ಜೂನ್ 14ರ ಬೆಳಿಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
ನಾಳೆಯಿಮದ (ಸೋಮವಾರ) ಭಾಗಶಃ ಅನ್​ಲಾಕ್ ಆಗುವ 19 ಜಿಲ್ಲೆಗಳಲ್ಲಿ ಯಾವುದಕ್ಕೆಲ್ಲ ಅನುಮತಿ ನೀಡಲಾಗಿದೆ ಹಾಗೂ ಯಾವುದೆಲ್ಲ ಮುಂದುವರಿಯಲಿದೆ ಎಂದು ಸರ್ಕಾರ ಮೊನ್ನೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರ 19 ಜಿಲ್ಲೆಗಳಲ್ಲಿ ಯಾವುದಕ್ಕೆಲ್ಲ ಅನುಮತಿ ನೀಡಿದೆ..:

* ಸಾರ್ವಜನಿಕ ವಿತರಣೆ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ.

*ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಮೇವಿನೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.

ಪ್ರಮುಖ ಸುದ್ದಿ :-   ದ್ವೇಷ ಭಾಷಣದ ಆರೋಪ; ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

*ಬಾರ್‌ ಮತ್ತು ರೆಸ್ಟೋರೆಂಟುಗಳಲ್ಲಿ ಕೇವಲ ಪಾರ್ಸೆಲ್‌ಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ.

*. ಬೀದಿ ಬದಿ ವ್ಯಾಪಾರಿಗಳಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ

*ಎಲ್ಲ ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಯ ಹಾಜರಾತಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ

* ಆದರೆ ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ. 30ರಷ್ಟು ಸಿಬ್ಬಂದಿಯ ಹಾಜರಾತಿಯೊಂದಿಗೆ ಮಾತ್ರ ಕಾರ್ಯ ನಿರ್ವಹಿಸಲು ಅನುಮತಿ.

* ಎಲ್ಲ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ, ನಿಮಾಣ ಚಟುವಟಿಕೆಗೆ ಸಂಬಂಧಿಸಿದ ಅಂಗಡಿಗಳು, ಮುಖ್ಯವಾಗಿ ಸಿಮೆಂಟ್ ಹಾಗೂ ಸ್ಟೀಲ್ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ

* ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆ ವರೆಗೆ ತೆರೆಯಲು ಅವಕಾಶ

*.ಆಟೋ ಮತ್ತು ಟ್ಯಾಕ್ಸಿಗಳಿಗೆ ಸಂಚರಿಸಲು ಅವಕಾಶ. ಆದರೆ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ

* ಅಗತ್ಯವಿದ್ದರೆ ಅಂತರ್ ಜಿಲ್ಲೆ ಸಂಚಾರಕ್ಕೆ ಅನುಮತಿ

* ಅನಾರೋಗ್ಯ ಪೀಡಿತ ರೋಗಿಗಳ ತುರ್ತು ಸಂಚಾರಕ್ಕೆ ಅವಕಾಶ.

* ಮೆಡಿಕಲ್ ಸಿಬ್ಬಂದಿಗೆ ಅವಕಾಶ

*. ಇ-ಕಾಮರ್ಸ್‌  ಸರಕು ಸಾಗಣೆ ಮತ್ತು ಆನ್ಲೈನ್ ಮನೆ ಸೇವೆಗಳಿಗೆ 24*7 ಸೇವೆಗಳಿಗೆ ಅವಕಾಶ

* ಅಂತರ್ಜಾಲ, ಟೆಲಿಕಾಂ ಸೇವೆ ಸಿಬ್ಬಂದಿ ಓಡಾಟಕ್ಕೆ ಅವಕಾಶ

* ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಐಡಿ ಕಾರ್ಡ್ ಇಟ್ಟುಕೊಂಡು ಸಂಚಾರಕ್ಕೆ ಅವಕಾಶ

*ವಿಮಾನ ಮತ್ತು ರೈಲು ಸಂಚಾರಕ್ಕೆ ಅವಕಾಶ. ಟಿಕೆಟ್ ತೋರಿಸಿ ಪ್ರಯಾಣಿಸಬಹುದು.

ಪ್ರಮುಖ ಸುದ್ದಿ :-   ಸುಳ್ಳು ಆದಾಯ ಪ್ರಮಾಣಪತ್ರ ಪ್ರಕರಣ : ಸುಮಾ ಸಾಹುಕಾರಗೆ ಹೈಕೋರ್ಟ್ ತರಾಟೆ

*. ಬೆಳಗ್ಗೆ 6ರಿಂದ 2 ಗಂಟೆಯವರೆಗೆ ಕನ್ನಡಕದ ಅಂಗಡಿ ತೆರೆಯಲು ಅವಕಾಶ

* ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಕ್ಕೆ ಅವಕಾಶ. ಆದರೆ 40 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ

* ಈ ಮೊದಲಲು ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ಕಚೇರಿಗಳ ಜೊತೆಗೆ ಕೃಷಿ ಮತ್ತು ಮಿತ್ರರಾಷ್ಟ್ರಗಳ ಸರ್ಕಾರಿ ಕಚೇರಿಗಳು, ಪಿಡಬ್ಲ್ಯುಡಿ, ವಸತಿ, ಆರ್‌ಟಿಒಗಳು, ಸಹಕಾರ, ನಬಾರ್ಡ್ ಮತ್ತು ಕಂದಾಯ ಇಲಾಖೆಗಳು ಮತ್ತು ಭಾರತ ಸರ್ಕಾರದ ಕಚೇರಿಗಳು ಶೇಕಡಾ 50 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಬಹುದು.

 

ಯಾವುದಕ್ಕೆ ಅನುಮತಿ ಇಲ್ಲ..

*, ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ, ಮೆಟ್ರೋ ರೈಲು ಸಂಚಾರ ಸ್ಥಗಿತ

*. ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೋವಿಡ್ ನೈಟ್ ಕರ್ಫ್ಯೂ ಜಾರಿ. ಈ ವೇಳೆ ಸಂಚಾರಕ್ಕೆ ನಿರ್ಬಂಧ

* ವಾರದ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧ

(ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ)

Revised Guidelines Dated 11-6-2021 to break the chain of Covid 19 transmission.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement