ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ? 5 ಎಲ್‌ಜೆಪಿ ಸಂಸದರಿಂದ ನಾಯಕತ್ವದ ಬದಲಾವಣೆಗೆ ಪಟ್ಟು, ಶೀಘ್ರವೇ ಜೆಡಿಯುಗೆ ಸೇರ್ಪಡೆ ಸಾಧ್ಯತೆ

ನವದೆಹಲಿ: ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಈಗ ಮತ್ತೊಂದು ಹಿನ್ನಡೆ ಅನುಭವಿಸಲಿದೆ.
ಲೋಕಸಭೆಯಲ್ಲಿ ಪಕ್ಷದ ಆರು ಸಂಸದರಲ್ಲಿ ಐವರು ಚಿರಾಗ್ ಪಾಸ್ವಾನ್ ಅವರನ್ನು ಸಂಸದೀಯ ಪಕ್ಷದ ನಾಯಕರಾಗಿ ಕೆಳಮನೆಯಲ್ಲಿ ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಯ ಮಾಹಿತಿ ಇರುವವರನ್ನು ಉಲ್ಲೇಖಿಸಿ, ಚಿರಾಗ್ ಅವರ ಸ್ವಂತ ಪಕ್ಷದ ಬಹುಪಾಲು ಲೋಕಸಭಾ ಸಂಸದರು ಅವರನ್ನು ಬದಲಿಸಿ ಹಾಜಿಪುರ ಸಂಸದ ಪಶುಪತಿ ಕುಮಾರ್ ಪರಾಸ ಅವರನ್ನು ಲೋಕಸಭೆಯಲ್ಲಿ ಎಲ್‌ಜೆಪಿ ಹೊಸ ನಾಯಕರನ್ನಾಗಿ ಮಾಡಲು ಉದ್ದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ನಿಟ್ಟಿನಲ್ಲಿ ಎಲ್‌ಜೆಪಿ ಸಂಸದರು ಈಗಾಗಲೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಈ ಹೊಸ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪತ್ರವೊಂದನ್ನು ಹಸ್ತಾಂತರಿಸಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಎಲ್‌ಜೆಪಿ ಸಂಸದರು ಭಾನುವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಪಕ್ಷದ ಹೊಸ ಬೆಳವಣಿಗೆಗಳ ಬಗ್ಗೆ ಪತ್ರವೊಂದನ್ನು ಹಸ್ತಾಂತರಿಸಿದರು. ಲೋಕಸಭೆಯಲ್ಲಿ ಪಶುಪತಿ ಕುಮಾರ ಪಾರಸ್ ಅವರನ್ನು ಎಲ್‌ಜೆಪಿಯ ಹೊಸ ನಾಯಕರಾಗಿ ಪರಿಗಣಿಸುವಂತೆ ಅವರು ವಿನಂತಿಸಿದ್ದಾರೆ ಎಂದು ಹೇಳಲಾಗಿದೆ.
ಪಕ್ಷದ ದಿವಂಗತ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಒಂದು ವರ್ಷದ ಹಿಂದೆ ತಮ್ಮ ತಂದೆಯ ಮರಣದ ನಂತರ ಪಕ್ಷವನ್ನು ನಿರ್ವಹಿಸುವಲ್ಲಿ ಸಾಕಷ್ಟು ಸವಾಲುಗಳನ್ನು ಹೊಂದಿದ್ದರು. ಅದರ ಸಂಸ್ಥಾಪಕ ರಾಮವಿಲಾಸ ಪಾಸ್ವಾನ ನಿಧನದ ನಂತರ ಲೋಕಸಭೆಯಲ್ಲಿ ಚಿರಾಗ್ ಪಾಸ್ವಾನ್ ಅವರ ನಾಯಕತ್ವದ ವಿರುದ್ಧ ಈಗ ದಂಗೆ ಎದ್ದಿರುವ ಪಕ್ಷದ ಸಂಸದರು ಚಿರಾಗ್ ಪಾಸ್ವಾನ್ ಅವರ ಕಾರ್ಯಶೈಲಿಯ ಬಗ್ಗೆ ಸಂತೋಷವಾಗಿಲ್ಲ ಎಂದು ವರದಿಗಳು ಹೇಳಿವೆ.

ಪ್ರಮುಖ ಸುದ್ದಿ :-   ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ...!

ಐವರು ಸಂಸದರು ಶೀಘ್ರದಲ್ಲೇ ಜನತಾದಳ (ಸಂಯುಕ್ತ)ಕ್ಕೆ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಫೆಬ್ರವರಿಯಲ್ಲಿ, ಎಲ್‌ಜೆಪಿ ಕಾರ್ಯಕರ್ತರು ಮತ್ತು ನಾಯಕರು ಜೆಡಿಯುಗೆ ಸೇರಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement