ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವದ ವಿರುದ್ಧ ಪಕ್ಷದ ನಾಯಕರು ಪರ ಹಾಗೂ ವಿರೋಧ ಹೇಳಿಕೆ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಉದ್ಭವಿಸಿದ್ದ ನಾಯಕಟ್ಟಿನ ಬಿಕ್ಕಟ್ಟು ನಿವಾರಣೆಗೆ ಬಂದಿದ್ದ ಅವರು, ಇಂದು (ಗುರುವಾರ) ಹಲವರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು.
ನಂತರ ಮಾತನಾಡಿದ ಅವರು, ನಾನು ಎಲ್ಲರ ಜೊತೆಯಲ್ಲೂ ಮಾತನಾಡಿದ್ದೇನೆ. ಪಕ್ಷದಲ್ಲಿ ಕೆಲವರು ಅಸಮಾಧಾನ ಹೊರ ಹಾಕಿರಬಹುದು. ಆದರೆ, ನಾವು ಪಕ್ಷದ ತತ್ವ ಸಿದ್ಧಾಂತಗಳಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ, ಕೇವಲ ಇಬ್ಬರು ಮೂವರು ಮಾತ್ರ ವಿರೋಧವಾಗಿ ಮಾತನಾಡಿದ್ದಾರೆ. ಇದರ ಬಗ್ಗೆ ನಾವು ಗಮನ ಹರಿಸಿದ್ದೇವೆ. ಈ ಎಲ್ಲ ಹೇಳಿಕೆಗಳ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಗಮನಕೊಡುತ್ತಾರೆ. ಈ ರೀತಿ ಹೇಳಿಕೆ ನೀಡುವುದರಿಂದ ಕಾರ್ಯಕರ್ತರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನು ಯಾರೂ ನೀಡುವುದು ಬೇಡ. ಪಕ್ಷಕ್ಕೆಮುಜುಗರ ಉಂಡಾಗುವಂತಹ ಹೇಳಿಕೆ ನೀಡಿದರೆ ಕ್ರಮ ಜರುಗಿಸಲಾಗುವುದು. ಒಂದು ವೇಳೆ ಈ ರೀತಿ ಬಹಿರಂಗ ಹೇಳಿಕೆಗಳಂತಹ ವಿದ್ಯಮಾನ ನಡೆದರೆ ರಾಜ್ಯ ಶಿಸ್ತು ಸಮಿತಿ ಕೇಂದ್ರದ ಶಿಸ್ತು ಸಮಿತಿಗೆ ಶಿಫಾರಸು ಮಾಡಿ ಕ್ರಮಕ್ಕೆ ಆಗ್ರಹಿಸಲಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಅರವಿಂದ ಬೆಲ್ಲದ ಮಾತ್ರ ಅವರನ್ನು ಭೇಟಿಯಾಗಿಲ್ಲ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ