ರಾಜ್ಯದಲ್ಲಿ ಜುಲೈ 3ನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ :ಸುರೇಶಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜುಲೈ 3ನೇ ವಾರ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ಶನಿವಾರ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಅದಕ್ಕಾಗಿ ಎಲ್ಲ ಸಿದ್ದತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಉದ್ದೀಶಿಸಲಾಗಿದ್ದು ಈ ತಿಂಗಳಾಂತ್ಯದ ವೇಳೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಪರೀಕ್ಷಾ ದಿನಾಂಕ ಪ್ರಕಟವಾದ ಮೊದಲ ದಿನ ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ವಿಷಯಗಳ ಪರೀಕ್ಷೆ ನಡೆಯಲಿದ್ದು, ಎರಡನೇ ದಿನ ಭಾಷಾವಾರು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ‌
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಎನ್-95 ಮಾಸ್ಕ್ ನೀಡಲಾಗುತ್ತದೆ. ಇದಕ್ಕೆ ಅನೇಕ ಸಂಘ-ಸಂಸ್ಥೆಗಳು ಮುಂದೆ ಬಂದಿವೆ. ಪರೀಕ್ಷಾ ಕೊಠಡಿಗಳ ಸುರಕ್ಷತೆಗೂ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮರಳಿ ಶಿಕ್ಷಣ ಇಲಾಖೆಗೆ:
ರಾಜ್ಯದಲ್ಲಿ ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಅನೇಕ ಶಿಕ್ಷಕರು ಕೋವಿಡ್ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಅವರನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ಈಗಾಗಲೇ ಸಂಬಂಧಪಟ್ಟವರಿಗೆ ಶಿಕ್ಷಣ ಆಯುಕ್ತರು ಪತ್ರ ಬರೆದಿದ್ದಾರೆ. ಸದ್ಯದಲ್ಲೇ ಶಿಕ್ಷಕರು ಇಲಾಖೆಗೆ ಮರಳಲಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement