ಗುವಾಹತಿ:ಅಸ್ಸಾಂನಲ್ಲಿ ಕ್ರಮೇಣ ಎರಡು ಮಕ್ಕಳ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಯೋಜನೆಗಳ ಲಾಭ ಪಡೆಯಬೇಕೆಂದರೆ ಇನ್ನು ಮುಂದೆ ಸರ್ಕಾರ ಜನಸಖ್ಯಾ ನೀತಿಯನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಹೇಳಿದ್ದಾರೆ.
ಅಸ್ಸಾಂ ಸರ್ಕಾರ ಜನಸಂಖ್ಯಾ ನೀತಿ ಜಾರಿಗೆ ತರಲು ಮುಂದಾಗಿದ್ದು, ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಇನ್ನು ಮುಂದೆ 2 ಮಕ್ಕಳ ಕಡ್ಡಾಯವಿರುವ ಜನಸಂಖ್ಯಾ ನೀತಿ ಪಾಲಿಸಬೇಕು ಎಂದು ಹೇಳಿದ್ದಾರೆ.
ಅಸ್ಸಾಂ ಸರ್ಕಾರ ಶೀಘ್ರದಲ್ಲೇ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲಿದ್ದು, ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವಾಗ ರಾಜ್ಯವು ಜನಸಂಖ್ಯಾ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಇಬ್ಬರು ಮಕ್ಕಳ ನಿಯಮವನ್ನು ಕಡ್ಡಾಯ ಮಾಡಲಾಗುತ್ತದೆ ಆದರೆ, ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಮತ್ತು ಚಹಾ ಬುಡಕಟ್ಟು ಜನಾಂಗದವರಿಗೆ ಎರಡು ಮಕ್ಕಳ ಮಾನದಂಡಗಳಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆಯಲು ವಿನಾಯಿತಿ ನೀಡಲಾಗುತ್ತದೆ ಎಂದು ಹೇಳಿದರು.
ಕಳೆದ ವಾರ, ಸಣ್ಣ ಕುಟುಂಬಗಳನ್ನು ಹೊಂದುವಂತೆ ಅಸ್ಸಾಂಗೆ ವಲಸೆ ಬಂದ ಮುಸ್ಲಿಮರಿಗೆ ಶರ್ಮಾ ಮನವಿ ಮಾಡಿದ್ದರು. ರಾಜ್ಯದ ಜನಸಂಖ್ಯೆಯು ನಿರಂತರವಾಗಿ ಸ್ಫೋಟಗೊಳ್ಳುತ್ತಿದ್ದರೆ, ವಾಸಿಸಲು ಸ್ಥಳಾವಕಾಶದ ಬಗ್ಗೆ ಘರ್ಷಣೆಗಳು ಉಂಟಾಗುತ್ತವೆ ಮತ್ತು ಕಾಮಾಕ್ಯ ದೇವಸ್ಥಾನ ಜಾಗ ಅತಿಕ್ರಮಣ ಮತ್ತು ಭೂಮಿ ಒತ್ತುವರಿ ತೆರವು ಮಾಡುವಂತೆ ಎಚ್ಚರಿಸಿದ್ದರು.
ಟಿಎಫ್ಆರ್ ಕುಸಿತ: ಕಾಂಗ್ರೆಸ್
ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೈಗೊಂಡ ಮತ್ತು 2020 ರ ಡಿಸೆಂಬರ್ನಲ್ಲಿ ಬಿಡುಗಡೆಯಾದ ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಡೇಟಾವನ್ನು ಹಂಚಿಕೊಂಡಿದ್ದ ಕಾಂಗ್ರೆಸ್ ಪಕ್ಷ, ಕಳೆದ ಐದು ವರ್ಷಗಳಲ್ಲಿ ಹೆಚ್ಚಿನ ಭಾರತೀಯ ರಾಜ್ಯಗಳಲ್ಲಿ ಒಟ್ಟು ಫಲವತ್ತತೆ ಪ್ರಮಾಣ (ಟಿಎಫ್ಆರ್) ಕುಸಿದಿದೆ ಎಂದು ಹೇಳಿದೆ.
ಸಮೀಕ್ಷೆಯ ಪ್ರಕಾರ, ಅಸ್ಸಾಂನಲ್ಲಿ ಮಹಿಳೆಯರ ಫಲವತ್ತತೆ ಪ್ರಮಾಣವು 2015-16ರಲ್ಲಿ 2.2 ರಿಂದ 2020-21ರಲ್ಲಿ 1.9 ಕ್ಕೆ ಇಳಿದಿದೆ ಮತ್ತು ಅಸ್ಸಾಂನ ಭವಿಷ್ಯದ ಜನಸಂಖ್ಯೆಯು ಪ್ರಸ್ತುತ ಜನಸಂಖ್ಯೆಗಿಂತ ಕಡಿಮೆಯಿರುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ