ಬೆಳಗಾವಿ: ಉಕ್ಕಿ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಹೋಗಿ ಆಯತಪ್ಪಿ ನದಿಗೆ ಬಿದ್ದು, ಸೇತುವೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಎನ್ಡಿಆರ್ಎಫ್ ತಂಡ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಪಾರು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಕ್ಕೋಳ-ಸಿದ್ನಾಳ ಗ್ರಾಮದ ಸಂಪರ್ಕ ಸೇತುವೆ ದಾಟುವಾಗ ನೀರಿನ ರಭಸಕ್ಕೆ ದಿಗ್ವಿಜಯ ಕುಲಕರ್ಣಿ ಎಂಬಾತ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸೇತುವೆಯ ಬಳಿ ಮರದ ಕೊಂಬೆಯಲ್ಲಿ ಸಿಲುಕಿದ್ದರು.ಎನ್ಡಿಆರ್ಎಫ್ ತಂಡ ಹಾಗೂ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಈ ವ್ಯಕ್ತಿಯನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.
ನೀರಿನ ರಭಸದ ನಡುವೆಯೂ ಯಶಸ್ವಿ ಕಾರ್ಯಾಚರಣೆ ನಡೆಸಿದ ಎನ್ಡಿಆರ್ಎಫ್ ತಂಡದವರು ಹಗ್ಗ ಕಟ್ಟಿ ಯುವಕನ ವರೆಗೂ ತಲುಪಿದರು. ನಂತರ ಹಗ್ಗದ ಮೂಲಕವೇ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ