ಚಿತ್ತಾಪುರ: ನಾಯಿ ಕಡಿತಕ್ಕೆ 30 ಕುರಿಗಳ ಸಾವು

ಕಲಬುರಗಿ: ನಾಯಿ ಕಡಿತದಿಂದ ಸ್ಥಳದಲ್ಲೇ 30 ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ನಡೆದಿದೆ.
ರಾವೂರ ನಿವಾಸಿ ಮಲ್ಲಿಕಾರ್ಜುನ ಭೀಮರಾಯ ಪೂಜಾರಿ ಎನ್ನುವವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಈ ಅನಾಹುತ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾಯಿಗಳು ದಾಳಿ ನಡೆಸಿ ಕುರಿಗಳನ್ನು ಕಚ್ಚಿವೆ. ಪರಿಣಾಮ 9 ದೊಡ್ಡ ಕುರಿಗಳು, 21 ಚಿಕ್ಕ ಕುರಿಗಳು ಮೃತಪಟ್ಟಿವೆ.ಅಂದಾಜು 2 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ವಾಡಿ ಪಿಎಸ್ಐ ವಿಜಯಕುಮಾರ ಭಾವಗಿ, ಪ್ರಭಾರಿ ಪಿಎಸ್ಐ ದೇವಿಂದ್ರ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement