ಕಾರವಾರ; ಕದಂಬ ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ನೌಕಾನೆಲೆಯ ಎರಡನೇ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ರಾಜನಾಥ್ ಸಿಂಗ್ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್‌ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‌ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‌ಗೆ ಆಗಮಿಸಿದರು.
ರಕ್ಷಣಾ ಸಚಿವರನ್ನು ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್. ಹರಿ ಕುಮಾರ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ, ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಸ್ವಾಗತಿಸಿದರು.
ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರಿಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು‌. ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಸಚಿವರು ಪರಿಶೀಲಿಸಿದರು.
ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಭೇಟಿ ನೀಡಿದ ರಾಜನಾಥ ಸಿಂಗ್ ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement