ಯುವತಿಯ ಮನವಿ ನಿರಾಕರಿಸಿದ ಹೈಕೋರ್ಟ್;ಬಂಧನ ಭೀತಿಯಲ್ಲಿ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶಿಸಬೇಕು ಎಂದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಮನವಿಗೆ ಹೈಕೋರ್ಟ್‌ ನಿರಾಕರಿಸಿದೆ.
ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ರಮೇಶ್‌ ಜಾರಕಿಹೊಳಿ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದಾಖಲಿಸಿರುವ ದೂರು ರದ್ದುಪಡಿಸುವಂತೆ ಕೋರಿ ಯುವತಿ ಸಲ್ಲಿಸಿರುವ ಅರ್ಜಿ ವಿಚಾರನೆಯನ್ನು ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಯುವತಿ ಪರ ವಕೀಲ ಸಂಕೇತ್‌ ಏಣಗಿ ವಾದ ಮಂಡಿಸಿ, ಅತ್ಯಾಚಾರ ಆರೋಪ ಸಂಬಂಧ ಯುವತಿ ದಾಖಲಿಸಿದ ದೂರಿನ ಸಂಬಂಧ ಆರೋಪಿ ರಮೇಶ್‌ ಜಾರಕಿಹೊಳಿ ಅವರನ್ನು ತನಿಖಾಧಿಕಾರಿಗಳು ಈವರೆಗೆ ಬಂಧಿಸಿಲ್ಲ. ಆದರೆ ರಮೇಶ್‌ ಜಾರಕಿಹೊಳಿ ದಾಖಲಿಸಿರುವ ದೂರಿನ ಸಂಬಂಧ ಯುವತಿಯನ್ನು ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಅರ್ಜಿದಾರ ಯುವತಿಯನ್ನು ಬಂಧಿಸದಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಕೋರಿಕೆಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಮೇಶ್‌ ಜಾರಕಿಹೊಳಿ ದಾಖಲಿಸಿರುವ ದೂರನ್ನು ರದ್ದುಪಡಿಸಲು ಕೋರಿ ಸಿಆರ್‌ಪಿಸಿ 482 ಅಡಿ ಸಲ್ಲಿಸಿದ ಅರ್ಜಿ ಇದಾಗಿದ್ದು, ಅರ್ಜಿದಾರಳನ್ನು ಬಂಧಿಸದಂತೆ ಈ ಅರ್ಜಿಯಲ್ಲಿ ಸೂಚಿಸಲು ಸಾಧ್ಯವಿಲ್ಲ. ಹೀಗಾಗಿ ಅಗತ್ಯವಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement