ಹೊನ್ನಾವರ: ಒಂದೆಡೆ ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಕ್ಕು ಜನಜೀವನ ಸಂಕಷ್ಟದಲ್ಲಿದೆ.ಈ ಸಂದರ್ಭದಲ್ಲಿ ಹೊನ್ನಾವರದ
ಟೊಂಕ ಪ್ರದೇಶದಲ್ಲಿ ‘ಹೊನ್ನಾವರ ಪೋರ್ಟ್ ಕಂಪನಿ’ಯು ಬಂದರು ನಿರ್ಮಾಣಕ್ಕೆ ಸಮುದ್ರ ಕಿನಾರೆ ಬದಿ ರಸ್ತೆ ವಿಸ್ತರಣೆಗೆ ಮುಂದಾಗಿದೆ. ಈ ಕುರಿತು ಕಾಮಗಾರಿಗೆಂದು ಈ ಮಳೆಗಾಲದಲ್ಲಿ ಕಾಸರಕೋಡು ಟೊಂಕಾ ಪ್ರದೇಶದಲ್ಲಿ ಮೀನುಗಾರರ ಶೆಡ್ಗಳು ಮತ್ತು ಮನೆಗಳ ತೆರವಿಗೆ ಮುಂದಾದಾಗ ಸ್ಥಳೀಯರು ಶನಿವಾರ ಭಾರೀ ಮಳೆಯಲ್ಲಿಯೇ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಬಂದರು ನಿರ್ಮಿಸುತ್ತಿರುವ ಕಂಪನಿ ಮತ್ತು ಸರ್ಕಾರದ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದ ಕೆಲವರು ಸಮುದ್ರದ ನೀರಿಗಿಳಿದು ಆತ್ಮಾಹುತಿ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು.
ರಸ್ತೆಯ ಬದಿಯಲ್ಲಿ ಮನೆಗಳು ಮತ್ತು ಮೀನುಗಾರಿಕಾ ಬಲೆಗಳು, ಸಲಕರಣೆಗಳನ್ನು ಇಡುವ ಶೆಡ್ಗಳಿವೆ. ಅವುಗಳನ್ನು ಏಕಾಏಕಿ, ಯಾವುದೇ ಸೂಚನೆ ನೀಡದೆ ಯಂತ್ರಗಳ ಸಹಾಯದಿಂದ ತೆರವು ಮಾಡಲಾಗುತ್ತಿದೆ ಎಂಬುದು ಸ್ಥಳೀಯರು ಆರೋಪಿಸಿದ್ದಾರೆ.
ಶನಿವಾರ ಬೆಳಿಗ್ಗೆಯೇ ನೂರಾರು ಪೊಲೀಸರು ಜಮಾಯಿಸಿದ್ದರು. ಮೀನುಗಾರರನ್ನು, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾಮಗಾರಿ ಮುಂದುವರಿಸಬಾರದು’ ಎಂದು ಸ್ಥಳೀಯರು ಆಗ್ರಹಿಸಿದರು. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಕೋವಿಡ್ ನಿಯಂತ್ರಣದ ಸಲುವಾಗಿ ಜಿಲ್ಲೆಯಲ್ಲಿ ವಾರಾಂತ್ಯದ ಲಾಕ್ಡೌನ್ ಜಾರಿಯಲ್ಲಿದೆ. ಇಮಥ ಸಂದರ್ಭದಲ್ಲಿ ಈ ರೀತಿ ಒಕ್ಕಲೆಬ್ಬಿಸುವ ಕಾರ್ಯಾಚರಣೆ ಸರಿಯೇ ಎಂದು ಅನೇಕರು ಪ್ರಶ್ನಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ