ಹಂಸಭಾವಿ: ತೆಂಗಿನ ಮರದಿಂದ ಕಾಯಿ ಬಿದ್ದು 11 ತಿಂಗಳ ಮಗು ಸಾವು

ಹಾವೇರಿ: ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಬಿದ್ದು ಪುಟ್ಟ ಕಂದಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಗ್ರಾಮದಲ್ಲಿ ನಡೆದಿದೆ.
ಮೃತ ಹಸಗೂಸನ್ನ 11 ತಿಂಗಳಿನ ತನ್ವೀತ್ ಮಲ್ಲಿಕಾರ್ಜುನ ವಾಲ್ಮೀಕಿ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಯ ಮಗು. ಸೋಮವಾರ ಬೆಳಗ್ಗೆ ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಮಗುವಿನ ಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಮಗುವಿನ ತಲೆಯ ಭಾಗದ ಮೇಲೆ ಭಾರವಾದ ತೆಂಗಿನಕಾಯಿ ಬಿದ್ದಿದೆ. ಕೂಡಲೇ ಮಗುವನ್ನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ 11 ತಿಂಗಳ ಹಸಗೂಸು ಮೃತಪಟ್ಟಿದೆ. ಮಗು ಕಳೆದುಕೊಂಡ ತಂದೆ-ತಾಯಿ ಹಾಗೂ ಕುಟುಂಬ ಸದಸ್ಯರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಹಂಸಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement