ಹೃದಯ ವಿದ್ರಾವಕ ಘಟನೆ..ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಬಚ್ಚಲುಕೋಣೆ ಕಿಟಿಕಿಗೆ ಕಟ್ಟಿದರು..

ಚಿಕ್ಕಬಳ್ಳಾಪುರ: ನವಜಾತ ಶಿಶುವೊಂದನ್ನು ಆಸ್ಪತ್ರೆಯ ಬಚ್ಚಲು ಕೋಣೆಯ ಕಿಟಕಿಗೆ ನೇಣು ಹಾಕಿ ಸಾಯಿಸಿರುವ ಅತ್ಯಂತ ಅಮಾನವೀಯ ಘಟನೆ ನಡೆದ ವರದಿಯಾಗಿದೆ.
ಚಿಕ್ಕಬಳ್ಳಾಪುರ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಹೃದಯವಿದ್ರಾವಕ ಕೃತ್ಯ ನಡೆದ ವರದಿಯಾಗಿದ್ದು, ಆಗತಾನೇ ಜನಿಸಿದ ಮಗುವನ್ನು ಬಚ್ಚಲ ಕೋಣೆಯ ಕಿಟಕಿಗೆ ನೇತುಹಾಕಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಬೆಳಗ್ಗೆ 8 ಗಂಟೆ ಸಮಯದಲ್ಲಿ ಬಚ್ಚಲಿನ ಬಾಗಿಲು ಬಂದ್​ ಆಗಿತ್ತು, ಸ್ವಚ್ಚಗೊಳಿಸಲೆಂದು ಎರಡು ಮೂರು ಸಲ ಹೋದಾಗಲೂ ಬಾಗಿಲು ಹಾಕಿತ್ತು. ನಂತರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಹೋಗಿ ನೋಡಿದಾಗ ಅಲ್ಲಿ ಹೆರಿಗೆಯಾದ ವಾಸನೆ ಬಂದಿದೆ. ತಕ್ಷಣ ಸಿಬ್ಬಂದಿ ಆಚೀಚೆ ನೋಡಿದಾಗ ಆಗ ತಾನೇ ಜನಿಸಿದ ಹೆಣ್ಣು ನವಜಾತ ಶಿಶು ನೇತಾಡುತ್ತಿರುವುದು ಕಂಡುಬಂದಿದೆ.
ಗಾಬರಿಗೊಂಡ ಆಸ್ಪತ್ರೆ ಸಿಬ್ಬಂದಿ ಕೂಡಲೇ ವಿಷಯವನ್ನು ಕರ್ತವ್ಯ ನಿರತ ವೈದ್ಯರಿಗೆ ತಿಳಿಸಿದ್ದಾರೆ. ತಕ್ಷಣ ವೈದ್ಯರು, ದಾದಿಯರು ಬಂದು ಮಗುವಿಗೆ ಆರೈಕೆ ನೀಡಿದರು. ವೈದ್ಯರು ಎಷ್ಟೇ ಪ್ರಯತ್ನಿಸಿದರಾದರೂ ಅಷ್ಟರಲ್ಲಿ ನವಜಾತ ಶಿಶು ಮೃತಪಟ್ಟಿದೆ.
ಬಹುಶಃ ಹೆಣ್ಣು ಮಗು ಎಂಬ ಕಾರಣಕ್ಕೆ ಹೀಗೆ ಮಾಡಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ, ಹೆರಿಗೆ ನೋವು ಬಂದ ಕೂಡಲೇ ಆಸ್ಪತ್ರೆಗೆ ಬಂದು ಬಾತ್​ರೂಮ್​ ಒಳಗೆ ಹೋಗಿದ್ದಾರೆ, ಅಲ್ಲಿಯೇ ಹೆರಿಗೆಯಾಗಿದೆ. ಆದರೆ ಮಗು ಹೆಣ್ಣು ಎಂಬ ಕಾರಣಕ್ಕೆ ಶಿಶುವಿನ ಕುತ್ತಿಗೆಗೆ ನೇಣು ಬಿಗಿದು ಒಳಗಡೆಯಿಂದ ಹೊರಗಡೆ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಮಗು ಕಿಟಕಿಯಲ್ಲಿ ಆಚೆ ಹೋಗಿಲ್ಲವಾದ್ದರಿಂದ ಅಲ್ಲೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಭೇಟಿ ನೀಡಿದ್ದು ಆಸ್ಪತ್ರೆಯ ಸಿಬ್ಬದಿಯಿಂದ ಮಾಹಿತಿ ಪಡೆಯುತ್ತಿದ್ದಾರೆ. ವೈದ್ಯರು ಹಾಗೂ ಪೊಲೀಸರು ಆಸ್ಪತ್ರೆಯ ಸಿಸಿಟಿವಿಯ ಮೊರೆ ಹೋಗಿದ್ದು ಆಸ್ಪತ್ರೆಗೆ ಬಂದ ಗರ್ಭಿಣಿಯರು ಹಾಗೂ ಹೆರಿಗೆಯಾದವರ ಬಗ್ಗೆ ತಪಸಣೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement