ಮಹತ್ವದ ಸುದ್ದಿ..ದ್ವಿತೀಯ ಪಿಯುಸಿ ರಿಪೀಟರುಗಳೂ ಪರೀಕ್ಷೆ ಇಲ್ಲದೆ ಪಾಸ್: ರಾಜ್ಯ ಸರ್ಕಾರ

ಬೆಂಗಳೂರು:ಈಗ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ
ರಾಜ್ಯದಲ್ಲಿ ಕೊರೋನ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಹೈಕೋಟ್೯ ಗೆ ರಾಜ್ಯ ಸರ್ಕಾರ ತಿಳಿಸಿದೆ.
ಕೊರೊನಾ ಕಾರಣದಿಂದಾಗಿ ಮೊದಲ ಬಾರಿಗೆ ದ್ವಿತೀಯ ಪಿಯು ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಯ ಅಂಕಗಳನ್ನು ಆಧರಿಸಿ ರಾಜ್ಯ ಸರ್ಕಾರ ​ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿತ್ತು. ಆದರೆ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೆ ಪರೀಕ್ಷೆ ಮಾಡಲು ನಿರ್ಧಾರ ಮಾಡಿತ್ತು. ಪಿಯುಸಿ ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ರಿಪೀಟರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂಬ ಸರ್ಕಾರದ ತೀರ್ಮಾನದ ವಿರುದ್ಧ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಹಾಗೂ ಈ ಬಗ್ಗೆ ನಿಲುವು ಸ್ಪಷ್ಟಪಡಿಸಲು ಸೂಚಿಸಿತ್ತು.
ಈಗ ಸರ್ಕಾರ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿದ್ದು, ಈ ವರ್ಷ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ತಿಳಿಸಿದೆ.
ನ್ಯಾಯಾಲಯದ ಅಣತಿಯಂತೆ ಪಿಯು ಬೋರ್ಡ್ ಸಮಿತಿಯನ್ನು ರಚಿಸಿ ತೀರ್ಮಾನ ಕೈಗೊಂಡಿದ್ದು, ದ್ವಿತೀಯ ಪಿಯುಸಿ ರಿಪೀರ್ಟ್ ಗಳಿಗೆ ಪರೀಕ್ಷೆ ಇಲ್ಲದೇ ಶೇ. 35 ರಷ್ಟು ಅಂಕಗಳೊಂದಿಗೆ ಪಾಸ್ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಸರ್ಕಾರ ದ್ವಿತೀಯ ಪಿಯುಸಿ 5.86 ಲಕ್ಷ ಹೊಸ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಿದೆ. ಈಗ ಈ ಪಟ್ಟಿಗೆ ರಿಪೀಟರ್ಸ್‌ ವಿದ್ಯಾರ್ಥಿಗಳು ಸೇರ್ಪಡೆಯಾಗಲಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement