ಕಾರು ಅಪಘಾತ: ಡಿಸಿಎಂ ಸವದಿ ಪುತ್ರ ಕಾರು ಚಾಲನೆ ಮಾಡುತ್ತಿರಲಿಲ್ಲ ಎಂದು ಎಸ್‌ಪಿ

posted in: ರಾಜ್ಯ | 0

ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಚಿವ ಸವದಿ ಅವರ ಪುತ್ರನ ಕಾರು ಅಪಘಾತಕ್ಕೀಡಾಗಿದ್ದು, ಸಚಿವರ ಪುತ್ರ ಚಿದಾನಂದ ಸವದಿ ಚಾಲನೆ ಮಾಡುತ್ತಿರಲಿಲ್ಲ ಎಂದು ಬಾಗಲಕೋಟ ಎಸ್.ಪಿ. ಮಾಹಿತಿ ನೀಡಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಮಾಹಿತಿ ನೀಡಿದ್ದು, ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ ೧೨ ಮಂದಿ ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ದೇವಲಾಪುರ ಕ್ರಾಸ್ ಬಳಿ ನಿನ್ನೆ ಸಂಜೆ ೬-೭ ಗಂಟೆ ನಡುವೆ ಅಪಘಾತ ನಡೆದಿದೆ. ಐಪಿಸಿ ೩೦೪ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಚಿದಾನಂದ ಸವದಿ ಕಾರನ್ನು ಚಾಲನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಅಪಘಾತ ಘಟನೆಯಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಹನುಮಂತ ಸಿಂಗ್ ರಜಪೂತ್ ಎಂಬುವರು ಕಾರು ಚಾಲನೆ ಮಾಡುತ್ತಿದ್ದರು. ಅವರನ್ನು ವಶಕ್ಕೆ ತೆಗೆದುಕೊಂಡು ಹೇಳಿಕೆ ಪಡೆದುಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement