ಜುಲೈ 8ಕ್ಕೆ ಕೇಂದ್ರ ಸಂಪುಟ ವಿಸ್ತರಣೆ ಸಾಧ್ಯತೆ : ಅದೃಷ್ಟ ಕರ್ನಾಟಕದ ಇಬ್ಬರಿಗೋ ಮೂವರಿಗೋ..?

posted in: ರಾಜ್ಯ | 0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದ್ದು, ಭಾರೀ ಕುತೂಹಲ ಕೆರಳಿಸಿರುವ ಕೇಂದ್ರ ಸಚಿವ ಸಂಪುಟ ಪುನಾರಚನೆ ಜುಲೈ 8 ರಂದು ಬೆಳಿಗ್ಗೆ 10-30ಕ್ಕೆ ನಡೆಯಲಿದೆ.

ಹಲವು ದಿನಗಳಿಂದ ಕೇಳಿ ಬರುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಪುನರಚನೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಕರ್ನಾಟಕಕ್ಕೆ ಎರಡು ಅಥವಾಮೂವರು ಸಂಸದರಿಗೆ ಸ್ಥಾನ ದೊರೆಯಲಿದೆ ಎನ್ನಲಾಗುತ್ತಿದೆ.

ಒಕ್ಕಲಿಗ, ವೀರಶೈವ-ಲಿಂಗಾಯತ, ದಲಿತ ಮೂರು ಸಮುದಾಯ ತಲಾ ಒಬ್ಬರಿಗೆಸಿಗಬಹುದು ಎಂದು ಹೇಳಾಗುತ್ತಿದೆ. ಕೇಂದ್ರದಲ್ಲಿ ಕರ್ನಾಟಕ ಸಚಿವರಲ್ಲಿ ಯಾರಿಗಾದರೂ ಕೊಕ್‌ ನೀಡಿದರೆ ಮೂರು ಸಚಿವ ಸ್ಥಾನ ಸಿಗಬಹುದು, ಇಲ್ಲದಿದ್ದರೆ ಎರಡು ಸಚಿವ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ.

ಒಕ್ಕಲಿಗ ಸಮುದಾಯದಿಂದ  ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಸಗಪರ್ಧೆಯಲ್ಲಿದ್ದು,   ವೀರಶೈವ-ಲಿಂಗಾಯತ ಸಮುದಾಯದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ  ಬಿ.ವೈ.ರಾಘವೇಂದ್ರ, ಶಿವಕುಮಾರ್ ಉದಾಸಿ ಹಾಗೂ ಪಿ.ಸಿ. ಗದ್ದೀಗೌಡರ್ ಮತ್ತು ದಲಿತ ಸಮುದಾಯದಿಂದ ಎ. ನಾರಾಯಣಸ್ವಾಮಿ ಅವರ ಹೆಸರು ಕರ್ನಾಟಕದಲ್ಲಿ ಚಾಲ್ತಿಯಲ್ಲಿದೆ.

ರಾಜ್ಯದಲ್ಲಿ ಸಚಿವರಾಗಿದ್ದ ಸುರೇಶ ಅಂಗಡಿ ನಿಧನದಿಂದ ಒಂದು ಸ್ಥಾನ ತುಂಬಬೇಕಿದೆ. ಹೀಗಾಗಿ ಇನ್ನೂ ಎರಡು ಸಂಸದರಿಗೆ ಸಚಿವ ಸ್ಥಾನ ಸಚಿವ ಸ್ಥಾನ ಸಿಗಬಹುದು ಎಂಬುದು ರಾಜ್ಯ ಬಿಜೆಪಿ ಲೆಕ್ಕಾಚಾರ. ಆದರೆ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟು ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳು ಸಿಂಹಪಾಲು ಪಡೆದರೆ ಕರ್ನಾಟಕಕ್ಕೆ ಎರುಡ ಜನರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ವೀಡಿಯೊ | ಕುಮಟಾ : ಸಮುದ್ರ ತೀರದಲ್ಲಿ ಬೃಹತ್‌ ತಿಮಿಂಗಿಲದ ಮೃತದೇಹ ಪತ್ತೆ

ಆದರೆ ಬಿಜೆಪಿ ಕೇಂದ್ರೀಯ ನಾಯಕತ್ವ ಮಾತ್ರ ಈ ಬಗ್ಗೆ ಮೌನವಾಗಿದೆ. ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಿಮಾಚಲ ಪ್ರದೇಶದಿಂದ ದೆಹಲಿಗೆ ಹಿಂತಿರುಗಿದ ನಂತರ ಮತ್ತೊಮ್ಮೆ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ 25 ಸಂಸದರನ್ನು ನೀಡಿರುವ ಕರ್ನಾಟಕಕ್ಕೆ ಎಷ್ಟು ಜನರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಬಗ್ಗೆ ಚರ್ಚೆಯಂತೂ ನಡೆಯುತ್ತಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement