ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ: ಬೈಕ್ ಸವಾರ ಸಾವು

ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಬೈಕ್ ಸವಾರ ಬಾಗಲಕೋಟೆ ತಾಲೂಕಿನ ಚಿಕ್ಕಹಂಡರಗಲ್ ನಿವಾಸಿ ಕೂಡಲೆಪ್ಪ ಬೋಳಿ(58) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ.

ಲಕ್ಷ್ಮಣ ಸವದಿ ಮಗ ಚಿದಾನಂದ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದವು. ಹೀಗಾಗಿ ಸವಾರನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಆಸ್ಪತ್ರೆಗೆ ಸೇರಿದ ಕೆಲವೇ ಕ್ಷಣಗಳಲ್ಲಿ ಕೂಡಲೆಪ್ಪ ಮೃತಪಟ್ಟಿದ್ದಾರೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿ 12 ಜನರು 2 ಕಾರಿನಲ್ಲಿ ಪ್ರವಾಸಕ್ಕೆ ತೆರಳಿ ವಾಪಸಾಗುತ್ತಿದ್ದರು. ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಚಿದಾನಂದ ಅವರ ಕಾರು ಹೊಲದಿಂದ ವಾಪಸಾಗುತ್ತಿದ್ದ ಬೈಕ್ ಸವಾರ ಕೂಡಲೆಪ್ಪ ಅವರ ಬೈಕಿಗೆ ಡಿಕ್ಕಿ ಹೊಡೆದು ಸಾವು ಸಂಭವಿಸಿದೆ ಎಂದು ವರದಿಯಾಗಿದೆ.
ಮೃತರ ಸಂಬಂಧಿಕ ಸಿದ್ದಪ್ಪ ಮಾತನಾಡಿ, ಚಿದಾನಂದ ಸವದಿಯವರು ತಮ್ಮ ಗಾಡಿಯ ನಂಬರ್ ಪ್ಲೇಟ್ ನ್ನು ಮುರಿದು ಅದರಲ್ಲಿರುವ ದಾಖಲೆಗಳನ್ನು ಮತ್ತು ಜನರನ್ನು ಮುಂದಿನ ಗಾಡಿಗೆ ಹಾಕಿ ಕಳುಹಿಸಿದ್ದಾರೆ. ಅಪಘಾತವಾದ ಕಾರಿನ ಫೋಟೋ, ವಿಡಿಯೊ ಸೆರೆಹಿಡಿಯುತ್ತಿದ್ದವರ ಮೊಬೈಲ್ ಕಿತ್ತುಕೊಂಡರು, ಪೊಲೀಸರು ಬರುವ ಹೊತ್ತಿಗೆ ಅಲ್ಲಿಂದ ತೆರಳಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement