ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೊದಲು ಸಚಿವ ಸ್ಥಾನಕ್ಕೆ ಸಂತೋಷ್ ಗಂಗ್ವಾರ್ ರಾಜೀನಾಮೆ

ನವದೆಹಲಿ:ಕೇಂದ್ರದ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ಇಂದು ಸಂಜೆ (ಬುಧವಾರ ಸಂಜೆ) ನಡೆಯಲಿರುವ ನಿಗದಿತ ಕ್ಯಾಬಿನೆಟ್ ಪುನರ್ರಚನೆಗೆ ಮುಂಚಿತವಾಗಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಹುದ್ದೆಯಲ್ಲಿದ್ದ ಗಂಗ್ವಾರ್ ಅವರು ಇಂದು ಮುಂಜಾನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಅವರು ಕಾರ್ಮಿಕ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಯೇ ಎಂದು ಕೇಳಿದಾಗ, ಗಂಗವಾರ್ ಅವರು . “ಹೌದು ನಾನು ರಾಜೀನಾಮೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಸರ್ಕಾರದಲ್ಲಿ ಅವರ ಹೊಸ ಪಾತ್ರ ಏನೆಂಬುದರ ಬಗ್ಗೆ ತಿಳಿದಿಲ್ಲ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2019 ರ ಮೇದಲ್ಲಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಇದು ಮಂತ್ರಿ ಮಂಡಳಿಯಲ್ಲಿ ನಡೆದ ಮೊದಲ ಪುನರ್ರಚನೆಯಾಗಿದೆ.
ಪ್ರಧಾನ ಮಂತ್ರಿ ಯುವ ಮುಖಗಳನ್ನು ತಂದು ಪುನರ್ರಚನೆಯಲ್ಲಿ ವಿವಿಧ ಸಾಮಾಜಿಕ ಗುಂಪುಗಳು ಮತ್ತು ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡುವ ನಿರೀಕ್ಷೆಯಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement