ನೀರಿನಲ್ಲಿ ಕೊಚ್ಚಿಹೋದ ದಂಪತಿ

ಹುಬ್ಬಳ್ಳಿ: ಕರಾವಳಿ ಕೆಲವು ಭಾಗಗಳು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55 ) ಹಾಗೂ ಸುಮಂಗಲಾ(48 ) ನೀರಿನಲ್ಲಿ ಕೊಚ್ಚಿಹೋದ ದಂಪತಿ. ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ದಂಪತಿ ಬೈಕಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ಸೇತುವೆಯಲ್ಲಿ ಬೈಕ್‌ ಆಯತಪ್ಪಿ ಹಳ್ಳಕ್ಕೆ ಬಿದ್ದ ಕಾರನ ಈ ಅವಘಡ ಸಂಭವಿಸಿದೆ.
ವಿಜಯಪುರದಲ್ಲಿಯೂ ಬುಧವಾರ ಭಾರೀ ಮಳೆ ಸುರಿಯುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಒಂದೆರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಜುಲೈ ೧೦ರ ವರೆಗೂ ಕೂಡ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement