ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಅದರಲ್ಲೂ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷವೂ ಸಹ ಸರಕಾರದ ಸೈಕಲ್ ಭಾಗ್ಯ ಮರೀಚೆಕೆಯಾಗಿದೆ ರಾಜ್ಯದ ೮ ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕೊರೊನಾ ಕಾರಣದಿಂದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ೮ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ನೀಡುವುದು ಅನುಮಾನ ಎನ್ನಲಾಗಿದೆ.
೨೦೧೯-೨೦ನೇ ಸಾಲಿನಲ್ಲಿ ರಾಜ್ಯದಲ್ಲಿ ೨,೪೪,೯೦೧ ಬಾಲಕಿಯರು ಹಾಗೂ ೨,೫೯,೬೨೪ ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ ೫ ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ ಲಾಕ್ ಡೌನ್, ಅನುದಾನದ ಕೊರತೆ ಕಾರಣಗಳಿಂದಾಗಿ ಸೈಕಲ್ ವಿತರಣೆ ಕೈಬಿಡಲಾಗಿತ್ತು.
ಪ್ರತೀ ವರ್ಷ ಆಗಸ್ಟ್ ತಿಂಗಳ ವೇಳೆಗೆ ಸೈಕಲ್ ವಿತರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಕೊರೋನಾ ಭೀತಿಯಿಂದ ಶಾಲೆಗಳು ಆರಂಭಗೊಳ್ಳದಿರುವುದರಿಂದ ಈ ಬಾರಿಯೂ ಸೈಕಲ್ ವಿತರಣೆಗೆ ಬ್ರೇಕ್ ಬೀಳಲಿದೆ ಎನ್ನಲಾಗಿದೆ.
ವಿದ್ಯಾರ್ಥಿಗಳ ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂದೇ ಸೈಕಲ್ ಭಾಗ್ಯ ಯೋಜನೆಯನ್ನು ಆರಂಭಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮದೇ ಸರಕಾರದಲ್ಲಿ ಈ ಯೋಜನೆಯನ್ನು ಕೈಬಿಟ್ಟಿರುವುದಕ್ಕೆ ರಾಜ್ಯದ ವಿದ್ಯಾರ್ಥಿ ವಲಯ ಹಾಗೂ ಪಾಲಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ