ರಾಜ್ಯ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ:ಸಿಎಂ ಬಿಎಸ್‌ವೈ

ಕಲಬುರಗಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ, ಈ ಬಗ್ಗೆ ಚಚೆ೯ಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ಕೆಕೆಆರಡಿಬಿ, ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಮಾದರಿ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣದ ಉಧ್ವಾಟನೆ ಕಾಯ೯ಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚಚೆ೯ ಬಂದಾಗ ಈ ವಿಷಯ ತಿಳಿಸುತ್ತೇನೆ ಎಂದು ಸಂಪುಟ ವಿಸ್ತರಣೆ ಬಗ್ಗೆ ಕೇಳಿಬಂದ ಊಹಾಪೋಹದ ಬಗ್ಗೆ ಸ್ಪಷ್ಟಪಡಿಸಿದರು.
ಮಂಡ್ಯಸಂಸದೆ ಸುಮಲತಾ ಮತ್ತು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈ ರೀತಿ ಕಚ್ಚಾಟವಾಡುವುದು ಅವಶ್ಯಕತೆ ಇಲ್ಲ. ಎಲ್ಲರೂ ಸಹೋದರತೆಯಿಂದ ಬಾಳುವುದನ್ನು ಕಲಿಯಬೇಕು ಎಂದರು.
ಅಲ್ಲಿನ ಅಭಿವೃದ್ಧಿ ಬಗ್ಗೆ ಎಲ್ಲರು ಒಟ್ಟಾಗಿ ಹೋಗಬೇಕು. ಅಂಬರೀಶ್ ಅವರ ಸ್ಮಾರಕ ನಿಮಾ೯ಣಕ್ಕೆ ಒಪ್ಪಿಗೆ ನೀಡಿದ್ದು, ನನಗೆ ಅತೀ ಸಮಾಧಾನ ತಂದಿದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement