ಕನ್ನಡದಲ್ಲೇ ಟ್ವೀಟ್‌ ಮಾಡಿದ ನೂತನ ರಾಜ್ಯಪಾಲರು..!

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು ಥಾವರ್‌ಚಂದ್‌ ಗೆಹ್ಲೋಟ್‌ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ. ಭಾರತ ಸಂವಿಧಾನದ ಮತ್ತು ಕಾನೂನಿನ ಪರಿರಕ್ಷಣೆ, ಸಂರಕ್ಷಣೆ ಮತ್ತು ಪ್ರತಿರಕ್ಷಣೆ ಹಾಗೂ ಕರ್ನಾಟಕ ರಾಜ್ಯದ ಜನತೆಯ ಸೇವೆ ಮತ್ತು ಯೋಗಕ್ಷೇಮಕ್ಕಾಗಿ ಪ್ರತಿಬದ್ಧನಾಗಿರುತ್ತೇನೆಂದು ನಾನು ಇಂದು ಕರ್ನಾಟಕ ರಾಜ್ಯದ ರಾಜ್ಯಪಾಲನಾಗಿ ಪ್ರಮಾಣ ವಚನ ಸ್ವೀಕರಿಸಿರುತ್ತೇನೆʼ ಎಂದು ಥಾವರ್‌ಚಂದ್‌ ಗೆಹ್ಲೋಟ್‌ ಅವರು … Continued

ಬದುಕಿನಲ್ಲಿ ಸ್ಪಷ್ಟತೆ ಮುಖ್ಯ, ವಿದ್ಯಾರ್ಥಿಗಳಿಗೆ ಓದಿದ ವಿಷಯಗಳಲ್ಲಿ ಸ್ಪಷ್ಟತೆ ಅಗತ್ಯ:ರಾಘವೇಶ್ವರ ಶ್ರೀಗಳು

ಸಾಹಸ ಸಾಧನೆಯ ಮಾರ್ಗ: ರಾಘವೇಶ್ವರ ಶ್ರೀ ಗೋಕರ್ಣ: ಸಾಹಸ ಮಾಡದೇ ಸಾಧನೆ ಸಾಧ್ಯವಿಲ್ಲ; ಸಾಹಸ ಮಾಡಿ ಬದುಕಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನ ವಿಜ್ಞಾನ ಚಿಂತನ ಸತ್ರ ಮಾಲಿಕೆಯ ಐದನೇ ವಿಚಾರ ಸಂಕಿರಣ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ … Continued

ಇಂದು ಅಥವಾ ನಾಳೆ ಸೌರ ಚಂಡಮಾರುತ ಭೂಮಿಯ ಅಪ್ಪಳಿಸುವ ನಿರೀಕ್ಷೆ : ಸೆಲ್ ಫೋನ್, ಜಿಪಿಎಸ್ ಸಿಗ್ನಲ್ಲುಗಳಿಗೆ ಪರಿಣಾಮ ಸಾಧ್ಯತೆ

ಪ್ರಬಲ ಸೌರ ಚಂಡಮಾರುತವು 16 ಲಕ್ಷ ಕಿಲೋಮೀಟರ್ ವೇಗದಲ್ಲಿ ಭೂಮಿಯನ್ನು ಸಮೀಪಿಸುತ್ತಿದೆ ಮತ್ತು ಈ ಚಂಡಮಾರುತವು ಭಾನುವಾರ (ಜುಲೈ 11) ಅಥವಾ ಸೋಮವಾರ (ಜುಲೈ 12) ಭೂಮಿಗೆ ಅಪ್ಪಳಿಸಲಿದೆ ಎಂದು ಹೇಳಲಾಗಿದೆ. ಈಶಾನ್ಯ ಅಥವಾ ಆಗ್ನೇಯ ಅಕ್ಷಾಂಶಗಳಲ್ಲಿ ವಾಸಿಸುವ ಜನರು ರಾತ್ರಿಯ ಸಮಯದಲ್ಲಿ ಸುಂದರವಾದ ಅರೋರಾವನ್ನು ನೋಡಲು ನಿರೀಕ್ಷಿಸಬಹುದು ಎಂದು ಸ್ಪೇಸ್‌ವೆದರ್.ಕಾಂ ವರದಿಯು ತಿಳಿಸಿದೆ. ಸೂರ್ಯನ … Continued

ಲಕ್ನೊ ಹೊರಗಿನ ಕಾಕೋರಿಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರ ಬಂಧಿಸಿದ ಎಟಿಎಸ್‌

ಲಕ್ನೋ: ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಭಾನುವಾರ ಕಾಕೋರಿ ಪಟ್ಟಣದಿಂದ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಇಬ್ಬರು ಭಯೋತ್ಪಾದಕರು ಅಲ್ ಖೈದಾ ಜೊತೆ ಸಂಬಂಧ ಹೊಂದಿದ್ದು, ರಾಜಧಾನಿ ಲಕ್ನೋ ಹೊರಗಡೆ ಇರುವ ಕಾಕೋರಿಯಲ್ಲಿರುವ ಮನೆಯೊಳಗೆ ತಲೆಮರೆಸಿಕೊಂಡಿದ್ದರು. ಎಟಿಎಸ್ ತಂಡ ಇಬ್ಬರ ಜಾಡು ಹಿಡಿದು ಒಂದು ವಾರದಿಂದ … Continued

ಅಕ್ರಮ ಗಣಿಗಾರಿಕೆ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ: ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ. ಆದರೆ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಂಸದೆ ಸುಮಲತಾ ಘೋಷಣೆ ಮಾಡಿದ್ದಾರೆ. ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮದ ನಂತರ ರಾಜಭವನದಲ್ಲಿ ಭಾನುವಾರ ಮಾತನಾಡಿದ ಅವರು, ನಾವು ಅಡ್ಡದಾರಿಯಲ್ಲಿ ಹೋಗುವುದು ಬೇಡ. ನಮ್ಮ ನೋವನ್ನು ಶಾಂತಿಯುತವಾಗಿ ಪ್ರಕಟ ಮಾಡೋಣ. ನಾನು ಯಾರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ … Continued

ಜೆಡಿಎಸ್‌ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ವಿಚಾರ ಕುರಿತು ಡಿಕೆಶಿ ಹೇಳಿದ್ದೇನು..?

ಬೆಂಗಳೂರು: ಪಕ್ಕದಲ್ಲಿ ಬಂದು ನಿಂತ ಜೆಡಿಎಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದ್ದು ಈಗಾಗಲೇ ಬಿಜೆಪಿ ಟೀಕಿಸಿದೆ. ಸಾಮಅಜಿಕ ಜಅಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಈಗ ಈ ಘಟನೆ ಬಗ್ಗೆ ಕಪಾಳಮೋಕ್ಷ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುಅವರು, ಆತ ನಮ್ಮ … Continued

ತಾಲಿಬಾನ್ ಉಪಸ್ಥಿತಿ ಹೆಚ್ಚಳದ ಮಧ್ಯೆ,ಅಫ್ಘಾನಿಸ್ತಾನದ ಕಂದಹಾರಿನಿಂದ ಭಾರತದ 50 ಅಧಿಕಾರಿಗಳ ಸ್ಥಳಾಂತರ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ವೇಗವಾಗಿ ಬೆಳೆಯುತ್ತಿರುವುದರಿಂದ, ಭಾರತವು ಕಂದಹಾರ್‌ನಲ್ಲಿರುವ ತನ್ನ ದೂತಾವಾಸದಿಂದ ಸುಮಾರು 50 ರಾಜತಾಂತ್ರಿಕರು ಮತ್ತು ಭದ್ರತಾ ಸಿಬ್ಬಂದಿಯನ್ನು ಕರೆಸಿಕೊಂಡಿದೆ ಎಂದು ವರದಿಯಾಗಿದೆ. ನ್ಯಾಟೋ ಮತ್ತು ಅಮೆರಿಕ ತಮ್ಮ ಸೈನ್ಯವನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಮಧ್ಯೆ ದಕ್ಷಿಣ ಅಫ್ಘಾನಿಸ್ತಾನದ ಹೊಸ ಪ್ರದೇಶಗಳನ್ನು ತಾಲಿಬಾನ್ ಸ್ಥಿರವಾಗಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತವು ಕಂದಹಾರ್‌ನಲ್ಲಿನ ತನ್ನ … Continued

ಹೊಸ ಜನಸಂಖ್ಯಾ ನೀತಿ ಅನಾವರಣಗೊಳಿಸಿದ ಸಿಎಂ ಯೋಗಿ ಅದಿತ್ಯನಾಥ, ಜನಸಂಖ್ಯೆ ಬೆಳವಣಿಗೆ 2.1% ಕ್ಕೆ ತರುವ ಗುರಿ

ಲಕ್ನೋ: ವಿಶ್ವ ಜನಸಂಖ್ಯಾ ದಿನಾಚರಣೆಯಂದು ಭಾನುವಾರ ಉತ್ತರ ಪ್ರದೇಶ ಸರ್ಕಾರ 2021-2030ರ ಹೊಸ ಜನಸಂಖ್ಯಾ ನೀತಿಯನ್ನು ಬಿಡುಗಡೆ ಮಾಡಿದೆ. ಹೊಸ ಜನಸಂಖ್ಯಾ ನೀತಿಯಲ್ಲಿ, ಜನನ ಪ್ರಮಾಣವನ್ನು 2026 ರ ವೇಳೆಗೆ ಪ್ರತಿ ಸಾವಿರ ಜನಸಂಖ್ಯೆಗೆ 2.1 ಕ್ಕೆ ಮತ್ತು 2030 ರ ವೇಳೆಗೆ 1.9 ಕ್ಕೆ ತಲುಪಿಸುವ ಗುರಿ ನಿಗದಿಪಡಿಸಲಾಗಿದೆ ರಾಜ್ಯದ ಒಟ್ಟು ಜನನ ಪ್ರಮಾಣ … Continued

ಕುಡಿದ ಅಮಲಿನಲ್ಲಿ ಪತ್ನಿಯ ಮೂಗು ಕಚ್ಚಿ ತುಂಡು ಮಾಡಿದ ಪತಿರಾಯ..!

ಧಾರವಾಡ: ಕುಡಿದ ಮತ್ತಿನಲ್ಲಿ ಪತಿರಾಯ ತನ್ನ ಪತ್ನಿಯ ಮೂಗಿಗೆ ಕಚ್ಚಿ ಕತ್ತರಿಸಿ ಪರಾರಿಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಉಮೇಶ ಎಂಬಾತನೇ ತನ್ನ ಪತ್ನಿಯ ಮೂಗಿದೆ ಕಚ್ಚಿ ತುಂಡು ಮಾಡಿ ಪರಾರಿಯಾದವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 5 ವರ್ಷಗಳ ಹಿಂದೆ ಉಮೇಶ ತನ್ನ ಪತ್ನಿಯನ್ನು ಬಿಟ್ಟು ಎಲ್ಲೋ ಹೋಗಿದ್ದ. ಈ … Continued

ಸುಮಲತಾ ಭೇಟಿ ನೀಡಿದ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ 

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿದ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿ ಗಣಿಗಳನ್ನು ಬಂದ್ ಮಾಡಿಸಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಶೀಲ್ದಾರ್ ರೂಪಾ ಅವರು ದಾಳಿ ಮಾಡಿದ್ದು ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದಾರೆ. ಚೆನ್ನನಕೆರೆ ಸಮೀಪದಲ್ಲಿ … Continued