ಕರ್ನಾಟಕದಲ್ಲಿ ಬುಧವಾರ ಕೊರೊನಾ ಸೋಂಕು, ಸಾವು ತುಸು ಇಳಿಮುಖ

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ತುಸು ಇಳಿಕೆಯಾಗಿದೆ.
ಹೊಸದಾಗಿ 1990 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 45 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 2,537 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ
ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.59 ಹೆಚ್ಚಾಗಿದೆ. ಜೊತೆಗೆ ಸಾವಿನ ಪ್ರತಿಶತ ಶೇ.2.26 ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,76,586 ಮಂದಿಗೆ ಏರಿಕೆಯಾಗಿದೆ.ಇಲ್ಲಿಯ ತನಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,06,933 ಕ್ಕೆ ಹೆಚ್ಚಳವಾಗಿದೆ .ಜೊತೆಗೆ 35,989 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
ಬೆಂಗಳೂರಿನಲ್ಲಿ ಹೆಚ್ಚಳ:ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಗಿಂತ ಸೋಂಕು ಏರಿಕೆಯಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ. ಇಂದು 400 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 8 ಮಂದಿ ಮೃತಪಟ್ಟಿದ್ದಾರೆ. 490 ಮಂದಿ ಚೇತರಿಸಿಕೊಂಡಿದ್ದಾರೆ.
ಜಿಲ್ಲಾವಾರು ಸಂಪೂರ್ನ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

14-07-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement