ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ..ಶೇ. 1ಕ್ಕಿಂತ ಕಡಿಮೆಯಾದ ಸಕಾರಾತ್ಮಕ ದರ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ದಿನಕ್ಕೆ ಇಳಿಕೆಯಾಗುತ್ತಿದೆ. ಸೋಮವಾರ 1,291 ಹೊಸ ಕೊರೊನಾ ಪ್ರಕರಣಗಳು ರಾಜ್ಯಾದ್ಯಂತ ದಾಖಲಾಗಿದೆ. ಇದೇ ಸಮಯದಲ್ಲಿ 40 ಸೋಂಕಿತರು ಮೃತಪಟ್ಟಿದ್ದಾರೆ. 3,015 ಸೋಂಕಿತರು ಗುಣುಮುಖರಾಗಿದ್ದಾರೆ.
ರಾಜ್ಯದ ಕೊರೊನಾ ಸಕಾರಾತ್ಮಕ ದರ ಶೇ. 0.94ಕ್ಕೆ ಕುಸಿದಿದೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 28,85,238ಕ್ಕೆ ಏರಿಕೆಯಾಗಿದೆ.ಇದುವರೆಗೆ ಗುಣಮುಖರಾದವರ ಸಂಖ್ಯೆ 28,21,491ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,527ಕ್ಕೆ ಇಳಿದಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಒಟ್ಟಾರೆ ಮೃತರ ಸಂಖ್ಯೆ 36,197ಕ್ಕೆ ಹೆಚ್ಚಳವಾಗಿದೆ. ಶನಿವಾರ ಕರೊನಾ ಮರಣ ಪ್ರಮಾಣ ಶೇ. 3.09ರಷ್ಟಿದೆ.
ಬೆಂಗಳೂರಿನಲ್ಲಿ 266 ಪ್ರಕರಣಗಳು ಕಾಣಿಸಿಕೊಂಡಿದ್ದು, ನಗರದ ಒಟ್ಟಾರೆ ಪ್ರಕರಣಗಳ ಸಂಖ್ಯೆ 12,22,455ಕ್ಕೆ ಹೆಚ್ಚಿದೆ. ಈವರೆಗೆ 11,95,843 ಸೋಂಕಿತರು ಗುಣಮುಖರಾಗಿದ್ದು, 10,809 ಸಕ್ರಿಯ ಪ್ರಕರಣಗಳಿವೆ. ದಕ್ಷಿಣ ಕನ್ನಡದಲ್ಲಿ 126, ಹಾಸನ ಮತ್ತು ಮೈಸೂರಿನಲ್ಲಿ ತಲಾ 125, ಚಿಕ್ಕಮಗಳೂರಿನಲ್ಲಿ 100 ಪ್ರಕರಣಗಳು ಕಾಣಿಸಿಕೊಂಡಿವೆ. ಉಳಿದಂತೆ ಬೇರೆಲ್ಲ ಜಿಲ್ಲೆಗಳ ಪ್ರಕರಣಗಳ ಸಂಖ್ಯೆ 100ಕ್ಕಿಂತ ಕಡಿಮೆಯಿದೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಏಕದಿನ ಏರಿಕೆಯ ಸಂಖ್ಯೆ ಒಂದಂಕಿಯಲ್ಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಒಂದೂ ಪ್ರಕರಣ ದಾಖಲಾಗಿಲ್ಲ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

19-07-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement