ಬೆಂಗಳೂರು: ತಗ್ಗು ಪ್ರದೇಶದಲ್ಲಿದ್ದ ಮನೆಯೊಂದರ ಮೇಲೆ, ಪಕ್ಕದ ಕಂಪೌಂಡ್ ಗೋಡೆ ಕುಸಿದು ಮನೆಯಲ್ಲಿದ್ದ ಅಣ್ಣ-ತಂಗಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸಂಭವಿಸಿದೆ.
ನೆಲಮಂಗಲ ಹೊರವಲಯದಲ್ಲಿ ಬಿನ್ನಮಂಗಲದಲ್ಲಿ ಭಾರೀ ಮಳೆಯಿಂದಾಗಿ ಖಾಲಿ ನೀವೇಶನದ ಗೋಡೆ, ಮನೆಯ ಮೇಲೆ ಕುಸಿದಿದ್ದರಿಂದ ತುಮಕೂರು ಮೂಲದ ಕಾವ್ಯ, ಮತ್ತು ವೇಣುಗೋಪಾಲ್ ಅಣ್ಣ-ತಂಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಬಿನ್ನಮಂಗಲದ ಕೃಷ್ಣಪ್ಪ ಎಂಬುವವರಿಗೆ ಜಾಗದಲ್ಲಿದ್ದ ಕಾಂಪೌಂಡ್ ಗೋಡೆ ಪಕ್ಕದ ತಗ್ಗು ಪ್ರದೇಶದಲ್ಲಿದ್ದ ಮನೆಯ ಮೇಲೆ ಕುಸಿದಿದ್ದರಿಂದ ಅಣ್ಣ-ತಂಗಿಯ ಸಾವಿಗೆ ಕಾರಣ ಎನ್ನಲಾಗಿದೆ. ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಂಪ್ರಥ್ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ