ಕರ್ನಾಟಕ ಸಿಎಂ ರೇಸಲ್ಲಿ ನಾನಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ರೇಸಿನಲ್ಲಿ ಹೆಸರು ಕೇಳಿಬರುತ್ತಿರುವವರಲ್ಲಿ ಒಬ್ಬರಾದ ಮುಖ್ಯಮಂತ್ರಿ ಸ್ಥಾನದ ಫ್ರಂಟ್ ರನ್ನರ್ ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಫ್ರಂಟ್ ಲೈನ್ ನಲ್ಲಿ ಯಾರಿದ್ದರೋ ನನಗೆ ಗೊತ್ತಿಲ್ಲ. ನಾನಂತೂ ಯಾವ ರೇಸಲ್ಲಿ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಲಿದ್ದಾರೆ.ಪಕ್ಷದ ಕೇಂದ್ರದ ವರಿಷ್ಠರು ಈ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಜತೆ ಚರ್ಚೆ ನಡೆದಿದೆ ಎಂಬುದು ಸಹ ನನಗೆ ಮಾಧ್ಯಮಗಳಿಂದ ನನಗೆ ತಿಳಿದಿದೆ. ಹೀಗಾಗಿ ಫ್ರಂಟ್ ರನ್ನರ್ ಅಥವಾ ಬ್ಯಾಕ್ ರನ್ನರ್ ಎಂಬ ಪ್ರಶ್ನೆ ಬರುವುದಿಲ್ಲ ಎಂದು ಹೇಳುವ ಮೂಲಕ ತಾನು ಮುಖ್ಯಮಂತ್ರಿ ರೇಸಲ್ಲಿ ಇದ್ದೇನೆ ಎಂಬ ವಿಚಾರವನ್ನು ತಳ್ಳಿಹಾಕಿದ್ದಾರೆ.
ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ನಡುವೆ ಏನು ಮಾತುಕತೆ ನಡೆದಿದೆಯೋ ಗೊತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಿಜೆಪಿ ಹಿರಿಯರು ನಿರ್ಧರಿಸುತ್ತಾರೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement