ಬೆಂಗಳೂರು: ಕಳೆದ 10 ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆ ಎಡೆಬಿಡದೆ ಸುರಿಯುತ್ತಿದೆ. ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಶೇ. 20ರಷ್ಟು ಅಧಿಕ ಮಳೆಯಾಗಿದೆ ಎಂದು ವರದಿಯಾಗಿದೆ.
ಇನ್ನೂ 2 ದಿನ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂಗಾರಿನ ಅವಧಿಯಲ್ಲಿ ಅಂದರೆ ಜೂನ್ 1 ರಿಂದ ಜುಲೈ 19ರ ಮಧ್ಯದ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಯಂತೆ 484 ಮಿ.ಮೀ. ಮಳೆಯಾಗಬೇಕು. ಆ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚು ಅಂದರೆ 578 ಮಿ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ (ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ) ಜಲಾಶಯಗಳ ನೀರಿನ ಮಟ್ಟ ಹೆಚ್ಚಿದೆ.


ನಿಮ್ಮ ಕಾಮೆಂಟ್ ಬರೆಯಿರಿ