ಸಿಎಂ ಬೆಂಗಾವಲು ವಾಹನಕ್ಕೆ ಶಿವರಾಂ ಹೆಬ್ಬಾರ ಕಾರು ಡಿಕ್ಕಿ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರ ಕಾರು ಗುದ್ದಿರುವ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಬಳಿ ನಡೆದಿದೆ.
. ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮುಖ್ಯಮಂತ್ರಿಗಳ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಗೆ ಹೆಚ್ಚಿನ ಹಾನಿಯಾಗಿಲ್ಲ ಎನ್ನಲಾಗಿದೆ.
ಹುಬ್ಬಳ್ಳಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಶಿವರಾಮ ಹೆಬ್ಬಾರ್ ಸಹ ಕಾರಿನಲ್ಲಿ ತೆರಳುತ್ತಿದ್ದಾರೆ. ಈ ವೇಳೆ ಹುಬ್ಬಳ್ಳಿ ಏರ್ ಪೋರ್ಟ್ ನಿಂದ ಮುಖ್ಯಮಂತ್ರಿ ಬೊಮ್ಮಾಯಿ ಹೊರ ಹೋಗುತ್ತಿದ್ದಾಗ ಬೆಂಗಾವಲು ವಾಹನ ಮತ್ತು ಶಿವರಾಮ ಹೆಬ್ಬಾರ್ ಅವರ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಆದರೆ ಮಾಜಿ ಸಚಿವ ಶಿವರಾಮ ಹೆಬ್ಬಾರ ಅವರು ಮುಖ್ಯಮಂತ್ರಿಗಳ ಕಾರಿನಲ್ಲಿದ್ದ ಕಾರಣ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ಅಂಕೋಲಾಕ್ಕೆ ತೆರಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement