ಧಾರವಾಡ ಹಾಲು ಒಕ್ಕೂಟಕ್ಕೆ ಅಧ್ಯಕ್ಷರ ಅವಿರೋಧ ಆಯ್ಕೆ,ಇನ್ಮುಂದೆ ಶಂಕರ ಮುಗದ ಸಾರಥ್ಯ

ಧಾರವಾಡ: ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಶಂಕರ ಮುಗದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶಂಕರ ಮುಗದ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಹಾವೇರಿ, ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದ ಬಸವರಾಜ ಅರಬಗೊಂಡ ವಿರುದ್ಧ ಒಕ್ಕೂಟದ ನಿರ್ದೇಶಕರು ಕಳೆದ ದಿ. ೨ರಂದು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಗೆ ಜಯ ಲಭಿಸಿತ್ತು.

ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಇಂದು (ಶುಕ್ರವಾರ) ಚುನಾವಣೆ ನಡೆಯಿತು. ಈಗ ಆಯ್ಕೆಯಾಗುವ ಮೂಲಕ ಶಂಕರ ಮುಗದ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದಂತಾಗಿದೆ.
ಒಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ಆರ್.ಟಿ.ಪೋಳ ಅವರು ಶಂಕರ ಮುಗದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಅವಿರೋಧವಾಗಿ ಆಯ್ಕೆಯಾದ ಶಂಕರ ಮುಗದ ಅವರನ್ನು ಶಾಸಕ ಅಮೃತ ದೇಸಾಯಿ,ಮುಖಂಡರಾದ ಅಡಿವೆಪ್ಪ ಹೊನ್ನಪ್ಪನವರ, ಬ ಮತ್ತಿತರರು ಅಭಿನಂದಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement