ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧದ ಆರೋಪದ ತನಿಖೆ ಮಾಡಿ ಎಂದು ಲೋಕಾಯುಕ್ತಕ್ಕೆ ಪತ್ರ ಬರೆದ ಮಾಜಿ ಸಚಿವ..!

ಉಡುಪಿ: ತನ್ನ ಆಸ್ತಿ ಬಗ್ಗೆ ತನಿಖೆ ನಡೆಸಿ ಎಂದು ಮಾಜಿ ಸಚಿವ ಕೋಡ ಶ್ರೀನಿವಾಸ ಪೂಜಾರಿ ಲೋಕಾಯುಕ್ತಕ್ಕೆ ಸ್ವತಂ ತನ್ನ ವಿರುದ್ಧವೇ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಕೆಲವರು ತಾನು 6 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟಿಸುತ್ತಿರುವುದಾಗಿ ಸುಳ್ಳು ಮಾಹಿತಿ ಹರಡಿಸುತ್ತಿದ್ದುದಕ್ಕೆ ನೊಂದಿರುವ ಅವರು, ಲೋಕಯುಕ್ತಕ್ಕೆ ಪತ್ರ ಬರೆದು ತನ್ನ ಆಸ್ತಿ ಬಗ್ಗೆ ತನಿಖೆ ನಡೆಸಿ ಎಂದು ಪತ್ರ ಬರೆದಿದ್ದಾರೆ.
ಬ್ಯಾಂಕ್‌ ಸಾಲದ ಜೊತೆಗೆ ಸ್ವಂತ ದುಡಿಮೆಯಿಂದ ಉಡುಪಿ ಜಿಲ್ಲೆಯ ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಗ್ರಾಮದಲ್ಲಿ 13 ಸೆಂಟ್ಸ್‌ ಜಾಗದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದೇನೆ. ಆದರೆ ಕೆಲವರು 6 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟಿಸುತ್ತಿರುವುದಾಗಿ ಸುಳ್ಳು ಮಾಹಿತಿ ಹರಡಿಸುತ್ತಿದ್ದು, ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದ್ದಾರೆ.
3 ಬಾರಿ ವಿಧಾನ ಪರಿಷತ್‌ ಸದಸ್ಯ, 2 ಬಾರಿ ಸಂಪುಟ ದರ್ಜೆ ಸಚಿವ ಹಾಗೂ ಒಂದು ಬಾರಿ ಮೇಲ್ಮನೆ ಪ್ರತಿಪಕ್ಷದ ನಾಯಕನಾಗಿದ್ದು, ಪ್ರತಿ ವರ್ಷ ಆಸ್ತಿಯ ವಿವರಗಳನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತಾ ಬಂದಿದ್ದೇನೆ. ಆದರೂ, ಈಗ ನಿರ್ಮಿಸುತ್ತಿರುವ ಮನೆಯ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುತ್ತಿರುವುದು ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ. ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವರು. ಆದರೆ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ. ಸ್ವಂತ ಆದಾಯದಿಂದ 13 ಸೆಂಟ್ಸ್‌ ಜಾಗ ಖರೀದಿಸಿ ಗ್ರಾ.ಪಂ.ನಿಂದ ಪರವಾನಗಿ ಪಡೆದು ಮನೆ ಕಟ್ಟಿಸುತ್ತಿದ್ದೇನೆ. 2 ವರ್ಷ ಹಿಂದೆ ಅಪೆಕ್ಸ್‌ ಬ್ಯಾಂಕ್‌ನಿಂದ 35 ಲಕ್ಷ ರೂ. ಸಾಲ ಪಡೆಯಲಾಗಿದ್ದು, ಮತ್ತೆ 40 ಲಕ್ಷ ರೂ. ಸಾಲಕ್ಕಾಗಿ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಮಹತ್ತರ ವಿದ್ಯಮಾನಗಳು ನಡೆಯುತ್ತಿರುವ ಸಂದರ್ಭ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ಮಗ ಎಂಬಿಎ ಮುಗಿಸಿ ಸ್ವಂತ ಉದ್ದಿಮೆ ನಡೆಸುತ್ತಿದ್ದು, ಇಬ್ಬರು ಪುತ್ರಿಯರ ವಿದ್ಯಾಭ್ಯಾಸ ಅಂತಿಮ ಹಂತದಲ್ಲಿದೆ. ನನ್ನ ಮಗನ ಸ್ವಂತ ದುಡಿಮೆ ಮತ್ತು ನನ್ನ ದುಡಿಮೆಯ ಹಣದಲ್ಲಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದೆ. ಮನೆ ನಿರ್ಮಾಣಕ್ಕಾಗಿ ಎರಡು ವರ್ಷಗಳ ಹಿಂದೆ ಅಪೆಕ್ಸ್ ಬ್ಯಾಂಕಿನಲ್ಲಿ 35 ಲಕ್ಷ ಸಾಲ ಪಡೆದು ಸಂಬಳ ಮತ್ತು ಗೌರವ ಧನದ ಮೂಲಕ ಸಾಲ ಮರುಪಾವತಿ ಮಾಡಿದ್ದೇನೆ. ಮನೆ ಕಟ್ಟಲು ಹಣ ಕಡಿಮೆಯಾಗಿರುವುದರಿಂದ ಮತ್ತೆ ಬ್ರಹ್ಮಾವರದ ವಾರಂಬಳ್ಳಿ ಎಸ್‌ಬಿಐ ಬ್ಯಾಂಕ್ ಶಾಖೆಯಲ್ಲಿ 40
ಲಕ್ಷ ಸಾಲಕ್ಕಾಗಿ ದಾಖಲಾತಿಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement