ಧಾರವಾಡ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲಿ

ಹುಬ್ಬಳ್ಳಿ: ನೂತನ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಯ ಐದು ಶಾಸಕರ ಪೈಕಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ನನ್ನ ಬದಲಾಗಿ ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕೋರಿಕೊಂಡಿದ್ದೇನೆ. ಯಾರಿಗೆ ನೀಡಿದರೂ ಮಾರ್ಗದರ್ಶನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಮುಖ್ಯಮಂತ್ರಿಯಾಗಿ, ಸಚಿವನಾಗಿ ಧಾರವಾಡ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಅಧಿಕಾರದ ಹೊರತಾಗಿಯೂ ಅಭಿವೃದ್ಧಿ ಬದ್ಧನಾಗಿದ್ದೇನೆ ಎಂದರು.
೧೦ ತಿಂಗಳ ಮುಖ್ಯಮಂತ್ರಿಯಾಗಿ ಸಾಕಷ್ಟು ಮಾದರಿ ಕಾರ್ಯ ಕೈಗೊಂಡಿದ್ದೇನೆ. ಈವರೆಗೂ ಸಚಿವನಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ . ನನ್ನ ಅನುಭವವನ್ನು ಕಿರಿಯರಿಗೆ ನೀಡುವ ಮೂಲಕ ಧಾರವಾಡ ಜಿಲ್ಲೆ ಏಳ್ಗೆಗೆ ಶ್ರಮಿಸುವೆ ಎಂದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement