ರಸಾಯನ ಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ. ಎಸ್. ಎಸ್. ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ, ಡಾ. ವೆಂಕಟೇಶ ಮುತಾಲಿಕ್ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಗಳ ಸಿಬಿಸಿಎಸ್ ಪಠ್ಯಕ್ರಮದನ್ವಯ ಬಿ.ಎಸ್ಸಿ. ಒಂದು ಮತ್ತು ಎರಡನೇ ಸೆಮಿಸ್ಟರ ತರಗತಿಗಳಿಗೆ ರಸಾಯನಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ.
ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಹಾಗೂ ಸಂಸ್ಥೆಯ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಅವರು ಈ ಪಠ್ಯಪುಸ್ತಕಗಳನ್ನು ಬಿಡುಗಡೆಗೊಳಿಸಿದ್ದಾರೆ.
ಈ ಸಮಾರಂಭದಲ್ಲಿ ಜೆ. ಎಸ್. ಎಸ್. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ(ಶ್ರೀಮತಿ) ಇಂದು ಪಂಡಿತ, ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಮಹಾವೀರ ಉಪಾಧ್ಯ, ಗ್ರಂಥಪಾಲಕರಾದ ಡಾ. ವಿಜಯ ದೇಶಬಾಗ್ ಮತ್ತು ಡಾ. ವೆಂಕಟೇಶ ಮುತಾಲಿಕ್ ಉಪಸ್ಥಿತರಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement