ನಮ್ಮ ಅನುಮತಿಯಿಲ್ಲದೆ ಮೇಕೆದಾಟು ಜಾರಿ ಸಾಧ್ಯವಿಲ್ಲ: ಕರ್ನಾಟಕಕ್ಕೆ ಅಣ್ಣಾಮಲೈ ಸ್ಪಷ್ಟೋಕ್ತಿ

ಚೆನ್ನೈ: ತಮಿಳುನಾಡಿನ ಸಮ್ಮತಿ ಇಲ್ಲದೇ ಮೇಕೆದಾಟು ಯೋಜನೆ ಜಾರಿಗೆ ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ಬಿಟ್ಟು ಕೊಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ ಮಾಧ್ಯಮ ಸಂದರ್ಶನವೊಂದರಲ್ಲಿ‌ ಮಾತನಾಡಿದ್ದು, ಮೇಕದಾಟು ವಿಚಾರದಲ್ಲಿ ತಮಿಳುನಾಡು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಾವು ಮೇಕೆದಾಟು ಯೋಜನೆ ವಿರೋಧಿಸುತ್ತೇವೆ. ಈ ವಿವಾದ ೨೦೧೭ ರಿಂದಲೂ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ಹೇಳಿದ್ದಾರೆ.
ನದಿ ಕೆಳಗಿನ ರಾಜ್ಯದ ಅನುಮತಿ ಇಲ್ಲದೇ ನದಿಗೆ ಅಣೆಕಟ್ಟು ಕಟ್ಟುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಹೇಳಿದೆ. ಹೀಗಾಗಿ ಮೇಲೆದಾಟಿ ನಲ್ಲಿ ಆಣೆಕಟ್ಟು ನಿರ್ಮಿಸಲು ನಮ್ಮ ಅನುಮತಿ ಬೇಕು. ಇದಲ್ಲದೇ ಕೇವಲ ಕರ್ನಾಟಕ ಚಿಂತಿಸಿದ ಮಾತ್ರಕ್ಕೆ ‌ಅಣೆಕಟ್ಟು ನಿರ್ಮಿಸಲು ಸಾಧ್ಯವಿಲ್ಲ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕು.
ಕೇಂದ್ರ ಸರ್ಕಾರ ನಮ್ಮ ವಾದವನ್ನು ಆಲಿಸಿ ಬೆಂಬಲಿಸುವ ವಿಶ್ವಾಸವಿದೆ ಎಂದಿದ್ದಾರೆ. ಅಲ್ಲದೇ ಈ ಯೋಜನೆಯಿಂದ ತಮಿಳುನಾಡಿನ ರೈತರ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ನದಿಪಾತ್ರದ‌ ರಾಜ್ಯದ ಅನುಮತಿ ಅಗತ್ಯ ಎಂಬ ಸಂಗತಿಯನ್ನು ಕೇಂದ್ರ ಜಲಸಂಪನ್ಮೂಲ ಇಲಾಖೆಯೂ ಹೇಳಿದೆ. ಹೀಗಾಗಿ ಕರ್ನಾಟಕ ಮೇಕೆದಾಟು ಆರಂಭಿಸಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.
ಆದರೆ ಉಪವಾಸ ಸತ್ಯಾಗ್ರಹದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಲು ಅಣ್ಣಾ ಮಲೈ ನಿರಾಕರಿಸಿದ್ದಾರೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement