ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯ

ಬೆಂಗಳೂರು: ಹೊರರಾಜ್ಯಗಳಿಂದ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ವರದಿ ಬರುವವರೆಗೆ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.
ಟೆಸ್ಟ್ ವರದಿ ಬರುವವರಿಗೆ ಪಾಲಿಕೆ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತದೆ. ನಾವು ಮಾಡುವ ಮೂಲಭೂತ ವ್ಯವಸ್ಥೆ ಅವರಿಗೆ ಬೇಡವೆಂದರೆ ಅವರ ಅನುಕೂಲಕ್ಕೆ ತಕ್ಕಹಾಗೆ ಹೊಟೇಲ್ ವ್ಯವಸ್ಥೆ ಮಾಡಿಕೊಳ್ಳಬಹುದು. ಕೆಲವು ಹೊಟೇಲ್‍ಗಳನ್ನು ನಾವೇ ನಿಗದಿ ಮಾಡಿದ್ದೇವೆ. ಅದರ ಖರ್ಚು-ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಎರಡನೆ ಅಲೆಯಲ್ಲಿ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು. ಅವುಗಳನ್ನು ಮುಂದುವರಿಸಲಾಗುವುದು. ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಹೊರಗಿನಿಂದ ಬರುವವರು ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.
ಪ್ರಸ್ತುತ ಸೋಂಕು ಕಡಿಮೆ ಇದ್ದು, ಈಗ ವಿಧಿಸಿರುವ ನಿರ್ಬಂಧಗಳು ಸಾಕಾಗುತ್ತದೆ. ಹೆಚ್ಚು ಸೋಂಕು ಬಂದರೆ ವೀಕೆಂಡ್ ಕರ್ಫ್ಯೂ ಮತ್ತು ಇತರೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು. ಯಾವುದೇ ಸಂದರ್ಭದಲ್ಲಿ ಹಾಸಿಗೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಕೊರೊನಾ ಸೋಂಕು ಡೆಲ್ಟಾ ಸೋಂಕಾಗಿ ಪರಿವರ್ತನೆಯಾಗಿದ್ದು, ಅಪಾರ್ಟ್‍ಮೆಂಟ್‍ಗಳಲ್ಲಿ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣದ ಬಗ್ಗೆ ಸಭೆ ನಡೆಸಲಾಗುವುದು.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement