ಮೇಕೆದಾಟು ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ತಮಿಳುನಾಡಿನಲ್ಲಿ ಕರ್ನಾಟಕದ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದ ಪಕ್ಷದವರು ಕೂಡ ತಮಿಳುನಾಡು ರಾಜಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರ ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಒಪ್ಪಿಗೆ ನೀಡಲಿದ್ದಾರೆ ಎಂಬ ಭರವಸೆಯಿದೆ ಎಂದು ಬೊಮ್ಮಾಯಿ ಹೇಳಿದರು.
ಎಲ್ಲವೂ ಸರಿಯಾದ ಕೂಡಲೇ ಕಾಮಗಾರಿ ಆರಂಭ ಮಾಡುತ್ತೇವೆ.ಈ ಯೋಜನೆ ಬಗ್ಗೆ ಯಾರಾದರೂ ಪ್ರತಿಭಟನೆ ಮಾಡಿದರೆ ಅದು ನಮಗೆ ಸಂಬಂಧಿಸಿದ್ದಲ್ಲ ಇಲ್ಲ ಎಂದು ಹೇಳಿದ ಮುಖ್ಯಮಂತ್ರಿ ಬೊಮ್ಮಾಯಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೋರಾಟದ ಬಗ್ಗೆ ತಿರುಗೇಟು ನೀಡಿದ್ದಾರೆ .

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement