ಉಡುಪಿ :ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಶೇಡಿಮನೆ ಗ್ರಾಮದ ಅರಸಮ್ಮಕಾನು ಎಂಬಲ್ಲಿ ಬಿಜೆಪಿ ಸಚಿವರಿಗೆ ಕಾಂಗ್ರೆಸ್ಸಿಗರು ಶುಭಕೋರಿದ್ದಾರೆ..!
ಮುಖ್ಯಮಂತ್ರಿ ಬೊಮ್ಮಾಯಿ ಮಂತ್ರಿಮಂಡಳದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕಾಂಗ್ರೆಸ್ಸಿಗರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಅಭಿನಂದನೆಗಳು..ಶುಭ ಕೋರುವವರು ಕಾಂಗ್ರೆಸ್ ಕಾರ್ಯಕರ್ತರು ಶೇಡಿಮನೆ ವಾರ್ಡ್ ಎಂಬ ಬ್ಯಾನರ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಉತ್ತಮ ಕೆಲಸಗಾರರು ಎಂಬ ಜನಮನ್ನಣೆಗೆ ಪಾತ್ರವಾಗಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷದಲ್ಲೂ ಅಭಿಮಾನಿಗಳಿದ್ದಾರೆ ಎನ್ನುವುದಕ್ಕೆ ಈ ಫೋಟೋ ಸಾಕ್ಷಿ ಆಗಿದೆ ಎನ್ನಬಹುದು.
ನಿಮ್ಮ ಕಾಮೆಂಟ್ ಬರೆಯಿರಿ