ಕಾರವಾರ: ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿ, ಲೋಕೋಪಯೋಗಿ ಎಇಇ ಸಾವು

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಓರ್ವ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿ ಈ ಅಪಘಾತ ಸಂಭವಿಸಿದ್ದು ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ಎಇಇ ಆಗಿದ್ದ 58 ವರ್ಷದ ಮುದುಕಣ್ಣನವರ್ ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ. ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಇಂದು ೯ಶನಿವಾರ)ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಹಾಗೂ ನೆರೆ ಸಂಬಂಧ ಅಧಿಕಾರಿಗಳ‌ ಸಭೆ ಆಯೋಜಿಸಲಾಗಿತ್ತು. ಈ‌ ಸಭೆಗೆ ಹಾಜರಾಗಲು ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಒಂದೇ ಕಾರಿನಲ್ಲಿ ಬರುತ್ತಿದ್ದರು.

ಈ ವೇಳೆ ಬಾಳೆಗುಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಓರ್ವ ಅಧಿಕಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನೂ ನಾಲ್ವರ ಪೈಕಿ‌ ಓರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಅಂಕೋಲಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement