ನನಗೆ ಸಂಪುಟದರ್ಜೆ ಸ್ಥಾನಮಾನ ಬೇಡ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್ ವೈ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನ-ಮಾನ ನೀಡಿ ಆದೇಶಿಸಿದ್ದರು. ಾದರೆ ಅದನ್ನು ಪಡೆಯಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ದಿನಾಂಕ 07-08-2021ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತನಗೆ ಮುಖ್ಯಮಂತ್ರಿ ಬೊಮ್ಮಾಯಿ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದೀರಿ. ಅದರೆ ತಮಗೆ ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನೀಡಬೇಕು ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಕೋರಿದ್ದಾರೆ. ಈ ಮೂಲಕ ಯಡಿಯೂರಪ್ಪ ಸಂಪುಟ ದರ್ಜೆ ಸ್ಥಾನಮಾನವನ್ನು ತಿರಸ್ಕರಿಸಿದ್ದಾರೆ.
ಶನಿವಾರ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯವನ್ನು ನೀಡುವಂತೆ ಆದೇಶಿಸಿದ್ದರು.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement