ಆ.13 ರಂದು ವಿಧಾನ ಪರಿಷತ್ತಿನ ಐವರು ಸದಸ್ಯರ ಸಮಿತಿ ಸಭೆ

ಬೆಂಗಳೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಬಿಡುಗಡೆಗೊಂಡಿರುವ ಅನುದಾನ ಬಿಡುಗಡೆ ಕುರಿತು ವಿಧಾನ ಪರಿಷತ್ತಿನ ಐದು ಜನ ಸದಸ್ಯರ ಸಮಿತಿ ಸಭೆ ಸಭಾಪತಿ ಬಸವರಾಜ ಹೊರಟ್ಟಿಯವರ ಅಧ್ಯಕ್ಷತೆಯಲ್ಲಿ ಆ.13 ರಂದು (ಶುಕ್ರವಾರ) ನಡೆಯಲಿದೆ.
ಕಳೆದ ವಾರ ಬೆಂಗಳೂರಿನಲ್ಲಿ ನಡೆದ ವಿಧಾನ ಪರಿಷತ್ತಿನ ಎಲ್ಲಾ ಸದಸ್ಯರ ಸಭೆಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎಂಬುದಾಗಿ ಬಹುತೇಕ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸರಕಾರದ ಮಟ್ಟದಲ್ಲಿ ಕ್ರಮ ಕೈಕೊಳ್ಳುವಂತೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೂ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಸಭೆಯಲ್ಲಿ ಸೂಚನೆ ನೀಡಿದ್ದರು. ಹಾಗೂ ಅಗಸ್ಟ್ 14 ರೊಳಗಾಗಿ ಶಾಸಕರಿಗೆ ಅನುದಾನ ಬಿಡಗಡೆ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಭಾಪತಿಗಳು ಎಲ್ಲ ಸದಸ್ಯರಿಗೆ ಭರವಸೆ ನೀಡಿದ್ದರು.
ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅಡ್ಡಿ ಆತಂಕಗಳು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಐದು ಜನ ವಿವಿಧ ಪಕ್ಷಗಳ ಹಿರಿಯ ಸದಸ್ಯರಾದ ಕೆ.ಸಿ.ಕೊಂಡಯ್ಯ, ಎಸ್.ರವಿ, ಡಾ.ತೇಜಸ್ವಿನಿ ಗೌಡ, ಹಣಮಂತ ನಿರಾಣಿ , ಅಪ್ಪಾಜಿಗೌಡ ಅವರನ್ನೊಳಗೊಂಡ ಸಮಿತಿ ನೇಮಿಸಿದ್ದರು.
ಈ ಸಮಿತಿಯ ಸಭೆ ಆ.13 ರಂದು ಬೆಂಗಳೂರಿನ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 106ರಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement