ಎಸ್ಸೆಸ್ಸೆಲ್ಸಿ: ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ನೂರಕ್ಕೆ ನೂರು ಫಲಿತಾಂಶ

ಧಾರವಾಡ: ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ ನೂರಕ್ಕೆ ೧೦೦ ಆಗಿದೆ.
ಶಾಲೆಗೆ ಬಸನಗೌಡ ಕ ಪಾಟೀಲ, ಅರುಣಕುಮಾರ ಹಾಗೂ ವಿನಾಯಕ ಮುದಗಣ್ಣವರ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ,

೧ ಬಸನಗೌಡ ಕ ಪಾಟೀಲ ೯೭.೧೨%
೨ ಅರುಣಕುಮಾರ ೯೬.೮೦%
೩ ವಿನಾಯಕ ಮುದಗಣ್ಣವರ ೯೬.೬೪%

ಈ ಉತ್ತಮ ಶೈಕ್ಷಣಿಕ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿಗಳು, ಕಾರ್ಯಾಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಶಾಲೆಯ ಪ್ರಾಚಾರ್ಯರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement