ಧಾರವಾಡ: ಧಾರವಾಡ ನಗರ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ ೧೦೦% ಆಗಿದೆ.
ಶಾಲೆಗೆ . ಸುಜಲ ಬ್ಯಾಹಟ್ಟಿ ೯೨.೧೬% -ಪ್ರಥಮ), ಸೂರಜ ಮನಗಾವಿ ೯೧.೬೮ -ದ್ವಿತೀಯ ಹಾಗೂ ಪುನೀತ್ ಈಟಿ ೮೯.೪೪ -ತೃತೀಯ ಸ್ಥಾನ ಪಡೆದಿದ್ದಾರೆ.
ಈ ಉತ್ತಮ ಶೈಕ್ಷಣಿಕ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿಗಳು, ಕಾರ್ಯಾಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಶಾಲೆಯ ಪ್ರಾಚಾರ್ಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ