ಮಹತ್ವದ ಸುದ್ದಿ.. ಕೋವಿಡ್-19 ಹಿನ್ನೆಲೆ: ರಾಜ್ಯ ಸರ್ಕಾರದಿಂದ ಗಣೇಶ ಹಬ್ಬ, ಮೋಹರಂ ಆಚರಣೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : 2021ನೇ ಸಾಲಿನ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೋಹರಂ ಮತ್ತು ಇತರೆ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್ ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಮರಿಯಲು, ಈ ಕೆಳಗಿನ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದೆ.
ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು 2021ರ ಆಗಸ್ಟಿನಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದ ಗಣೇಶ ಚತುರ್ಥಿ, ಶ್ರೀಕೃಷ್ಣ ಜನ್ಮಾಷ್ಟಮಿ, ಮೋಹರಂ, ದುರ್ಗಾ ಪೂಜೆ ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಸಲಹೆ ನೀಡಲಾಗಿದೆ.

ಗಣೇಶ ಹಬ್ಬದ ಆಚರಣೆ ಮಾರ್ಗಸೂಚಿಗಳು..

* ದೇವಸ್ಥಾನದೊಳಗೆ ಸರಳವಾಗಿ ಆಚರಿಸುವುದು.
*ದೇವಸ್ಥಾನ ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ
*ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
*ಪಾರಂಪರಿಕ ಗೌರಿ ಗಣೇಶ ಮೂರ್ತಿ ಪೂಜಿಸುವುದು, ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಇಲ್ಲವೇ ಸಮೀಪ ಜಿಲ್ಲಾಡಳಿತ ಸೂಚಿಸಿದ ಸ್ಥಳಗಳಲ್ಲಿ ವಿಸರ್ಜನೆ ಮಾಡುವುದು.
*ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು.
*ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡುವುದು.
ದರ್ಶನಕ್ಕೆ ಬರುವ ಭಕ್ತರು ಕೋವಿಡ್ ನಿಯಂತ್ರಣ ಕ್ರಮಗಳಾದಂತ ಮಾಸ್ಕ್ಧರಿಸಬೇಕು, 6 ಅಡಿ ಸಾಮಾಜಿಕ ಅಂತರ ಕಾಪಾಡವುದು ಕಡ್ಡಾಯ
*ಗಣೇಶ ಹಬ್ಬ ಆಚರಣೆಗೆ ಸ್ಥಳೀಯ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹೊರಡಿಸುವ ಆದೇಶ ಪಾಲಿಸುವುದು.
ಕೋವಿಡ್‌ ಹಿನ್ನೆಲೆಯಲ್ಲಿ ಮೋಹರಂ ಮತ್ತು ಗಣೇಶೋತ್ಸವ ಹಬ್ಬವನ್ನುಸರಳವಾಗಿ ಆಚರಿಸಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.

(ಮಾರ್ಗಸೂಚಿಗಳನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ)

ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

(Reg Gowri Ganesha and Moharum Festival Guidelines dt 12-08-2021)

ಮೋಹರಂ ಹಬ್ಬದ ಮಾರ್ಗಸೂಚಿಗಳು

*ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳು, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯಾ ನಿರ್ಬಂಧಿಸಲಾಗಿದೆ.
ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ. ಒಂದು ವೇಳೆ ಹೆಚ್ಚು ಜನರು ಆಗಮಿಸಿದಲ್ಲಿ, ಎರಡು ಪಾಳಿಯಲ್ಲಿ ಪ್ರಾರ್ಥನೆ ನಡೆಸುವುದು.
ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಸಾರ್ವಜನಿಕರು ಮುಟ್ಟದೇ ದೂರದಿಂದ ನೋಡತಕ್ಕದ್ದು.
ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಆಯೋಜನೆಗೆ ನಿರ್ಬಂಧ.
ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿ ಧರಿಸುವುದು.
60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡವುದು.
ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವಂತಿಲ್ಲ.
ಹಸ್ತಲಾಘವ, ಆಲಿಂಗನ ಮಾಡುವಂತಿಲ್ಲ
ಮಸೀದಿ ಹೊರತುಪಡಿಸಿ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮೋಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ.
ಹಬ್ಬದ ಪ್ರಯುಕ್ತ ಮೆರವಣಿಗೆ, ಸಾರ್ವಜನಿಕ ಸ್ಥಳಗಳ್ಲಿ ಭಾಷಣ ಕಾರ್ಯಕ್ರಮ ಆಯೋಜಿಸುವಂತಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement