ಬೆಂಗಳೂರಿನಿಂದ ಕಾರವಾರದ ವರೆಗೂ ಚಲಿಸಲಿದೆ ಗಾಜಿನ ಛಾವಣಿ ವಿಸ್ಟಾಡೋಮ್ ರೈಲು

ಕಾರವಾರ: ಬೆಂಗಳೂರಿನ ಯಶವಂತಪುರ ನಿಲ್ದಾಣ ಹಾಗೂ ಕಾರವಾರ ನಡುವೆ ಹಗಲು ರೈಲು ಆ.16ರಿಂದ ಪುನಃ ಸಂಚಾರ ಆರಂಭಿಸಲಿದ್ದು, ಈ ಬಾರಿ ಗಾಜಿನ ಛಾವಣಿ ಹೊಂದಿರುವ ಪ್ರವಾಸೋದ್ಯಮ ಹೆಚ್ಚಿಸುವ ವಿಸ್ಟಾಡೋಮ್ ಬೋಗಿಗಳು ರೈಲಿನ ಆಕರ್ಷಣೆಯಾಗಿವೆ.
ಪಶ್ಚಿಮ ಘಟ್ಟ ಸಾಲು ಹಾಗೂ ಅರಬ್ಬೀ ಸಮುದ್ರದ ಸೌಂದರ್ಯ, ಹಳ್ಳಕೊಳ್ಳಗಳ ಸೌಂದರ್ಯವನ್ನು ಸವಿಯಬಹುದಾಗಿದೆ. ಈ ಹಿಂದೆ ಸಂಚರಿಸುತ್ತಿದ್ದ ರೈಲನ್ನು ಪ್ರಯಾಣಿಕರ ಕೊರತೆಯ ಕಾರಣದಿಂದ ಇದನ್ನು ಮಂಗಳೂರಿಗೆ ಸೀಮಿತಗೊಳಿಸಲಾಗಿತ್ತು. ಅಲ್ಲಿಂದಲೇ ಮರು ಪ್ರಯಾಣ ಶುರುವಾಗುತ್ತಿತ್ತು. ಆ.17ರಿಂದ ಮುಂದಿನ ಸೂಚನೆಯ ವರೆಗೆ ರೈಲು ಸಂಖ್ಯೆ 06211 ಕಾರವಾರರ ವರೆಗೆ ವಾರದಲ್ಲಿ ಮೂರು ದಿನ ಸಂಚರಿಸಲಿದೆ.
ಕಾರವಾರದಿಂದ ಮಂಗಳವಾರ, ಗುರುವಾರ ಹಾಗೂ ಶನಿವಾರ ಯಶವಂತಪುರಕ್ಕೆ ಸಂಚರಿಸಲಿದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರ ಕಾರವಾರಕ್ಕೆ ತಲುಪಲಿದೆ. ಒಟ್ಟು 14 ಬೋಗಿಗಳಲ್ಲಿ ಎರಡು ವಿಸ್ಟಾಡೋಮ್, ಒಂದು ಹವಾನಿಯಂತ್ರಿತ, ಒಂಬತ್ತು ಸಾಮಾನ್ಯ ಬೋಗಿಗಳು ಇರಲಿವೆ. ರೈಲು ಉತ್ತರ ಕನ್ನಡದ ಪ್ರವಾಸಿ ಸ್ಥಳಗಳಾದ ಮುರುಡೇಶ್ವರ, ಗೋಕರ್ಣ ಮತ್ತು ಅಂಕೋಲಾದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement