ಭಾರತದ 75ನೇ ಸ್ವಾತಂತ್ರ್ಯೋತ್ಸವ: 7500 ಚದರ್​ ಅಡಿ ರಾಷ್ಟ್ರಧ್ವಜ ದೇಶಕ್ಕೆ ಅರ್ಪಿಸಲಿರುವ ಪಶ್ಚಿಮ ಬಂಗಾಳ ರಾಜ್ಯಪಾಲ

ನವದೆಹಲಿ: ಆಗಸ್ಟ್​ 15ರಂದು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್ಕರ್​ ಅವರು 7500 ಚದರ್​ ಅಡಿಯಷ್ಟು ವಿಶಾಲವಾದ ರಾಷ್ಟ್ರಧ್ವಜವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್​​ನಲ್ಲಿ, ಭಾರತೀಯ ಪ್ರವಾಸೋದ್ಯಮ ಮತ್ತು ಡಾರ್ಜಲಿಂಗ್​​ನ ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಸಹಯೋಗದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ, ಈ ವಿಶಾಲವಾದ ರಾಷ್ಟ್ರಧ್ವಜವನ್ನು ರಾಜ್ಯಪಾಲರು ಅರ್ಪಿಸಲಿದ್ದು, ನಂತರ ಅದನ್ನು ವಿಕ್ಟೋರಿಯಾ ಸ್ಮಾರಕದ ಮೇಲೆ ಹೊದಿಸಲಾಗುವುದು ಎಂದು ವರದಿ ತಿಳಿಸಿದೆ.
ರಾಜ್ಯಪಾಲ ಧನ್​ಕರ್​ ಅವರು ರಾಷ್ಟ್ರಕ್ಕೆ ಅರ್ಪಿಸುತ್ತಿರುವ 7500 ಚದರ್​ ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜವನ್ನು 2021ರ ಏಪ್ರಿಲ್​ 25ರಂದು ಹಿಮಾಲಯ ಪರ್ವತಾರೋಹಣ ಸಂಸ್ಥೆಯ ಅಧಿಕಾರಿಗಳು, ಸಿಕ್ಕಿಂನ, ಸಮುದ್ರ ಮಟ್ಟಕ್ಕಿಂತ 16,500 ಅಡಿ ಎತ್ತರದ ಪ್ರದೇಶವಾದ ಮೌಂಟ್​ ರೆನಾಕ್​ ಎಂಬಲ್ಲಿ ಹಾರಿಸಿದ್ದಾರೆ. ಅದಾದ ನಂತರ ಧ್ವಜ ಡಾರ್ಜಲಿಂಗ್​​ನಲ್ಲಿ ಹಾರಿಸಲಾಗಿದೆ. ಇದೀಗ ಕೊಲ್ಕತ್ತಾಕ್ಕೆ ತರಲಾಗಿದ್ದು, ಇಲ್ಲಿ ಸ್ವಾತಂತ್ರ್ಯೋತ್ಸವದಂದು ರಾಜ್ಯಪಾಲರು ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಲಿದ್ದಾರೆ.
ಈ ಬಾರಿ ದೇಶದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆ ಮಾಡಲಾಗುತ್ತಿದ್ದು, ಅದರ ಸವಿನೆನಪಿಗಾಗಿ ಸ್ಮಾರಕದ ಆವರಣದಲ್ಲಿ 750 ಸಸಿಗಳನ್ನು ನೆಡಲಾಗುವುದು. ಕಾರ್ಯಕ್ರಮದಲ್ಲಿ ಧನ್ಕರ್​ ಅವರಿಗೆ ಸಿಐಎಸ್​ಎಫ್​ ಪಡೆಯಿಂದ ಗೌರವ ವಂದನೆ ಸಲ್ಲಿಸಲಾಗುವುದು. ಅದಾದ ಬಳಿಕ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement