ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ತಾವು ಸಂಚರಿಸುವ ರಸ್ತೆಗಳಲ್ಲಿ ಭದ್ರತೆಗಾಗಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದೆಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಸಭೆ ಸಮಾರಂಭಗಳಲ್ಲಿ ಹಾರ-ತುರಾಯಿ ಹಾಕಬಾರದೆಂದು ಆದೇಶ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಸಾರ್ವಜನಿಕರಿಗೆ ಆಗುವ ಕಿರಿಕಿರಿ ತಪ್ಪಿಸಲು ತಾವು ಮನೆಯಿಂದ ಹೊರಡುವಾಗ ಅಥವಾ ಅಧಿಕೃತ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಭದ್ರತೆಗಾಗಿ ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದು ಎಂದು ಸೂಚನೆ ನೀಡಿದ್ದಾರೆ.
ನಾನು ಸಾಮಾನ್ಯ ಪ್ರಜೆಯಂತೆ ವಾಹನದಲ್ಲಿ ಸಂಚರಿಸುತ್ತೇನೆ. ಹೀಗಾಗಿ ನನಗೆ ಝೀರೋ ಟ್ರಾಫಿಕ್ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement