ಅಫಘಾನಿಸ್ತಾನ ಬಿಕ್ಕಟ್ಟು : ಕಾಬೂಲ್‌ನಿಂದ 129 ಜನರ ಹೊತ್ತ ಏರ್ ಇಂಡಿಯಾ ವಿಮಾನ ದೆಹಲಿಗೆ

ಕಾಬೂಲ್: ಅಫಘಾನಿಸ್ತಾನದ ಮೇಲೆ ತಾಲಿಬಾನ್ ಉಗ್ರರು ಬಿಗಿ ಹಿಡಿತ ಸಾಧಿಸಿದ್ದು, ಕಾಬೂಲ್‌ ನಗರದ ಹೊರವಲಯವನ್ನು ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ 129 ಪ್ರಯಾಣಿಕರನ್ನೊಳಗೊಂಡ ಏರ್ ಇಂಡಿಯಾ ವಿಮಾನವು ಕಾಬೂಲ್‌ನಿಂದ ದೆಹಲಿಗೆ ಪ್ರಯಾಣ ಬೆಳೆಸಿದೆ.
ಈ ಮಧ್ಯೆ,ಬೆಳವಣಿಗೆ ನಡೆದಿದ್ದು, ಶಾಂತಿಯತವಾಗಿ ಅಧಿಕಾರ ಹಸ್ತಾಂತರಿಸಲು ಚರ್ಚಸಿಉವ ಸಲುವಾಗಿ ಹಿರಿಯ ಅಧಿಕಾರಿ ಅಬ್ದುಲ್ಲಾ ಅಬ್ದುಲ್ಲಾ ಸೇರಿದಂತೆ ಅಫಘಾನಿಸ್ತಾನದ ಸರ್ಕಾರಿ ನಿಯೋಗವು ತಾಲಿಬಾನ್ ಪ್ರತಿನಿಧಿಗಳನ್ನು ಭೇಟಿಯಾಗಲು ಕತಾರ್‌ಗೆ ತೆರಳಿದೆ ಎಂದು ಆಫಘನ್ ಸಂಧಾನಕಾರರು ತಿಳಿಸಿದ್ದಾರೆ.
ಮುಂದಿನ ಕೆಲವು ದಿನಗಳಲ್ಲಿ ಶಾಂತಿಯುತ ಅಧಿಕಾರ ಹಸ್ತಾಂತರವನ್ನು ಬಯಸುತ್ತಿದ್ದೇವೆ ಎಂದು ತಾಲಿಬಾನ್ ವಕ್ತಾರರು ಹೇಳಿರುವುದಾಗಿ ರಾಯಿಟರ್ಸ್‌ ಸುದ್ದಿಸಂಸ್ಥೆ ವರದಿ ಮಾಡಿದೆ.
ಮಹಿಳೆಯರಿಗೂ ಶಿಕ್ಷಣ, ಉದ್ಯೋಗದಲ್ಲಿ ಆದ್ಯತೆ ನೀಡಲಿದ್ದೇವೆ. ಆದರೆ ಮಹಿಳೆಯರು ಕಡ್ಡಾಯವಾಗಿ ಹಿಜಾಬ್ ಧರಿಸಬೇಕು. ಮರಣದಂಡನೆ, ಕಲ್ಲುತೂರಾಟ, ಅಂಗಚ್ಛೇದನದಂತಹ ಶಿಕ್ಷೆಗಳನ್ನು ನೀಡುವ ಬಗ್ಗೆ ನ್ಯಾಯಾಲಯಗಳು ನಿರ್ಧರಿಸಲಿವೆ ಎಂದೂ ವಕ್ತಾರರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement